12:37 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್‌ ಎಚ್ಚರಿಕೆ

17/09/2022, 20:03

ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್‌ ಮುಖ್ಯಸ್ಥ ಡೇವಿಡ್‌ ಮಾಲ್ಪಾಸ್‌ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ.

ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ. ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ಕಳವಳ ವ್ಯಕ್ತಪಡಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್‌ ಮಾಲ್ಪಾಸ್‌ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.

34.5 ಕೋಟಿ ಜನ ಉಪವಾಸದತ್ತ: ರಷ್ಯಾ-ಉಕ್ರೇನ್‌ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು