4:36 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಅನ್ ಲಾಕ್ ಆಗುತ್ತಿದ್ದಂತೆ ಮತ್ತೆ ಡೆಲ್ಟಾ ಪ್ಲಸ್ ಆತಂಕ: ಕಂಟೈನ್ಮೆಂಟ್ ಝೋನ್ ಜಾರಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಸೂಚನೆ

27/06/2021, 08:09

ಬೆಂಗಳೂರು(reporterkarnataka news) : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಅಬ್ಬರ ಕಡಿಮೆಯಾಗಿ ಇಡೀ ರಾಜ್ಯ ಅನ್‌ಲಾಕ್ ಆಗುತ್ತಿದ್ದಂತೆ ಮತ್ತೆ ಆತಂಕ ಎದುರಾಗಿದೆ. ಇದೀಗ ಡೆಲ್ಟಾ ಫ್ಲಸ್ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರುವಂತೆ ಕೇಂದ್ರ ಸರಕಾರ ರಾಜ್ಯಕ್ಕೆ ಸೂಚನೆ ನೀಡಿದೆ.

ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರಿಗೆ ಈ ಕುರಿತು ಪತ್ರ ರವಾನಿಸಿದ್ದಾರೆ. ಡೆಲ್ಲಾ ಪ್ಲಸ್ ವೈರಸ್ ಪತ್ತೆ ಯಾಗುತ್ತಿರುವ ಕಾರಣ ಕಂಟೈನ್ಮೆಂಟ್ ಝೋನ್ ನಿರ್ಬಂಧ ಜಾರಿಗೆ ತರಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಈಗಾಗಲೇ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡಿದ್ದು, ದಕ್ಷಿಣ ಭಾರತದಾದ್ಯಂತ ವ್ಯಾಪಿಸೋ ಆತಂಕವಿದೆ‌.

ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.

ಡೆಲ್ಟಾ ಪ್ಲಸ್ ವೇರಿಯೆಂಟ್ ಅತೀ ವೇಗದಲ್ಲಿ ಹರಡುತ್ತಿದೆ. ಅಷ್ಟೇ ವೇಗದಲ್ಲಿ ಶ್ವಾಸಕೋಶಕ್ಕೆ ಅವರಿಸಿಕೊಳ್ಳುತ್ತಿದೆ. ಕೊರೋನಾ ವೈರಸ್ ಪೈಕಿ ಡೆಲ್ಟಾ ಪ್ಲಸ್ ಅತ್ಯಂತ ಅಪಾಯ ಕಾರಿ ಅನ್ನೋದು ಈಗಾಗಲೇ ಸಾಬೀತಾಗಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಕ್ಕೆ ಪತ್ರದಲ್ಲಿ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು