10:00 AM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಅನ್ ಲಾಕ್ ಆಗುತ್ತಿದ್ದಂತೆ ಮತ್ತೆ ಡೆಲ್ಟಾ ಪ್ಲಸ್ ಆತಂಕ: ಕಂಟೈನ್ಮೆಂಟ್ ಝೋನ್ ಜಾರಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಸೂಚನೆ

27/06/2021, 08:09

ಬೆಂಗಳೂರು(reporterkarnataka news) : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಅಬ್ಬರ ಕಡಿಮೆಯಾಗಿ ಇಡೀ ರಾಜ್ಯ ಅನ್‌ಲಾಕ್ ಆಗುತ್ತಿದ್ದಂತೆ ಮತ್ತೆ ಆತಂಕ ಎದುರಾಗಿದೆ. ಇದೀಗ ಡೆಲ್ಟಾ ಫ್ಲಸ್ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರುವಂತೆ ಕೇಂದ್ರ ಸರಕಾರ ರಾಜ್ಯಕ್ಕೆ ಸೂಚನೆ ನೀಡಿದೆ.

ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರಿಗೆ ಈ ಕುರಿತು ಪತ್ರ ರವಾನಿಸಿದ್ದಾರೆ. ಡೆಲ್ಲಾ ಪ್ಲಸ್ ವೈರಸ್ ಪತ್ತೆ ಯಾಗುತ್ತಿರುವ ಕಾರಣ ಕಂಟೈನ್ಮೆಂಟ್ ಝೋನ್ ನಿರ್ಬಂಧ ಜಾರಿಗೆ ತರಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಈಗಾಗಲೇ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡಿದ್ದು, ದಕ್ಷಿಣ ಭಾರತದಾದ್ಯಂತ ವ್ಯಾಪಿಸೋ ಆತಂಕವಿದೆ‌.

ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.

ಡೆಲ್ಟಾ ಪ್ಲಸ್ ವೇರಿಯೆಂಟ್ ಅತೀ ವೇಗದಲ್ಲಿ ಹರಡುತ್ತಿದೆ. ಅಷ್ಟೇ ವೇಗದಲ್ಲಿ ಶ್ವಾಸಕೋಶಕ್ಕೆ ಅವರಿಸಿಕೊಳ್ಳುತ್ತಿದೆ. ಕೊರೋನಾ ವೈರಸ್ ಪೈಕಿ ಡೆಲ್ಟಾ ಪ್ಲಸ್ ಅತ್ಯಂತ ಅಪಾಯ ಕಾರಿ ಅನ್ನೋದು ಈಗಾಗಲೇ ಸಾಬೀತಾಗಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಕ್ಕೆ ಪತ್ರದಲ್ಲಿ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು