5:35 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ಸಿ ವಿಶುವಲ್ ಕಮ್ಯುನಿಕೇಶನ್ ಶಿಕ್ಷಣ

18/09/2022, 23:34

ಮಂಗಳೂರು(reporterkarnataka.com):ನಗರದ ಸಂತ ಅಲೋಶಿಯಸ್ ಕಾಲೇಜು ಪತ್ರಿಕೋದ್ಯಮ ವಿಭಾಗದಲ್ಲಿ ಹೊಸತಾಗಿ  ಬಿಎಸ್ಸಿ ವಿಶುವಲ್ ಕಮ್ಯುನಿಕೇಶನ್ ಎಂಬ ಕೋರ್ಸ್ ನ್ನು ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ  ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದ  ಉದ್ಘಾಟನೆಯನ್ನು  ಕಾಲೇಜಿನ ಎಲ್ ಎಫ್ ರಸ್ಕಿನ್ಹಾ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪೋಲರಾಯ್ಡ್ ಕ್ಯಾಮರಾದಿಂದ ಭಾವಚಿತ್ರ ತೆಗೆಯೋ ಮುಖಾಂತರ ಜರುಗಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ವಿಶುವಲ್ ಕಮ್ಯೂನಿಕೇಶನ್ ನಲ್ಲಿ ಬಿ.ಎಸ್ಸಿ. ಪದವಿಯನ್ನು ಪರಿಚಯಿಸಲಾಗುತ್ತಿದೆ.

ಕಾರ್ಯಕ್ರಮದ ಮುಖ್ಯ ಅತಿಥಿ, ರೀಲ್ ಟ್ರೈಬ್ ಡಿಜಿಟಲ್ ಸಂಸ್ಥೆಯ ಸ್ಥಾಪಕ  ಹೃಶಿಕೇಶ್ ಅನಿಲ್ ಕುಮಾರ್ ರವರು ವಿಶುವಲ್ ಕಮ್ಯೂನಿಕೇಶನ್ ವಿಭಾಗದ ಅಧಿಕೃತ ಯೂಟ್ಯೂಬ್ ವಾಹಿನಿ ಮತ್ತು ‘ ಕ್ಯಾಂಪಸ್ ಬಝ್’ ಎಂಬ ವಿದ್ಯಾರ್ಥಿ ಬ್ಲಾಗ್ ಗೆ ಚಾಲನೆ ನೀಡಿದರು.

ಅವರು ಮಾತನಾಡಿ ಮೊದಲ ವರ್ಷದ ಪದವಿಗೆ ಸೇರಲು ಬಯಸುವ ವಿದ್ಯಾರ್ಥಿಗಳು ನಗರದ ಮೊಟ್ಟ ಮೊದಲ ವಿಶುವಲ್ ಕಮ್ಯೂನಿಕೇಶನ್ ಬ್ಯಾಚ್ ನ ಭಾಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಬಹುದು ಎಂದರು.

ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ತಯಾರಿಸಲಾದ ಮರಳು ಕಲೆಯ ಚಿತ್ರವೊಂದನ್ನೂ ಅನಾವರಣಗೊಳಿಸಲಾಯಿತು. 

ಈ ಕೋರ್ಸ್ ನ ಉದ್ದೇಶ ಕಲೆ, ಸೃಜನಶೀಲತೆ, ಮತ್ತು ತಂತ್ರಜ್ಞಾನದ ಸಂಗಮದೊಂದಿಗೆ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ದಾರಿದೀಪವಾಗುವುದಲ್ಲದೆ, ಆಧುನಿಕ ಮಾಧ್ಯಮ ಜಗತ್ತಿಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರಿಸುವುದಾಗಿದೆ. 

ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ ಎಸ್ ಜೆ, ಪ್ರಾಂಶುಪಾಲರಾದ ವಂ. ಡಾ ಪ್ರವೀಣ್ ಮಾರ್ಟಿಸ್, ಎಸ್ ಜೆ, ಕುಲಪತಿ ಡಾ ಆಲ್ವಿನ್ ಡಿಸಾ, ವಿಭಾಗ ಮುಖ್ಯಸ್ಥರಾದ ಡಾ ಶ್ವೇತಾ ಮಂಗಳತ್ ಮತ್ತು ಕೋರ್ಸ್ ಸಂಯೋಜಕರಾದ ಅಬ್ದುಲ್ ರಶೀದ್, ಕ್ಸೇವಿಯರ್ ವಿಜ್ಞಾನ ಬ್ಲಾಕ್ ನ ನಿರ್ದೇಶಕ ಡಾ ನಾರಾಯಣ ಭಟ್, AIMIT ಬೀರಿಯ ನಿರ್ದೇಶಕರಾದ ವಂ. ಡಾ ಮೆಲ್ವಿನ್ ಪಿಂಟೋ ಉಪಸ್ಥಿತರಿದ್ದರು. ಸಂವಾದ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು