5:42 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಸೆಲ್ಫಿ ಹುಚ್ಚು: ತುಂಗಭದ್ರಾ ಎಡದಂಡೆ ಕಾಲುವೆಗೆ ಬಿದ್ದು ಇಬ್ಬರು ಪಿಯು ವಿದ್ಯಾರ್ಥಿಗಳು ಸಾವು

19/09/2022, 19:07

ರಾಯಚೂರು(reporterkarnataka.com): ಕಲಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಸೆಲ್ಫಿ ತೆಗೆಯಲು ಹೋದ ಇಬ್ಬರು ಪಿಯು ವಿದ್ಯಾರ್ಥಿಗಳು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮೃತಪಟ್ಟವರನ್ನು ನಗರದ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಎಂದು ಗುರುತಿಸಲಾಗಿದೆ.

ಪಿಕ್ನಿಕ್ ಗಾಗಿ ಬಂದಿದ್ದ ವಿದ್ಯಾರ್ಥಿಗಳು ನಿನ್ನೆ ಸಂಜೆ ಸೆಲ್ಫಿ ತೆಗೆಯಲು ಕಾಲುವೆಗೆ ಬಿದ್ದಿದ್ದಾರೆ. ಅದಾದ ಬಳಿಕ ನಾಪತ್ತೆ ಆಗಿದ್ದರು.

ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಇಂದು ಎನ್.ಆರ್. ಶೆಟ್ಟಿಯ ಮುಚ್ಚಿರುವ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಶವವಾಗಿ ಪತ್ತೆ ಆಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು