12:27 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ

19/09/2022, 21:08

ಮಂಗಳೂರು(reporterkarnataka.com):ಭಾರತೀಯ ಕೃಷಿ ಅನುಸಂಧಾನ ಪರಿಷತ್‌ನ ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಮತ್ತು ಇಫ್ಕೋ ಆಶ್ರಯದಲ್ಲಿ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ 2022 ಮತ್ತು ಸಸಿ ನೆಡುವ ಕಾರ್ಯಕ್ರಮ ಜರುಗಿತು.


ದ.ಕ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಂಕರಿ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಪೋಷಣ ಮಾಹೆಯ ಪ್ರಾಮುಖ್ಯತೆಯನ್ನು ತಿಳಿಸಿದರು.

ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ, ಮುಖ್ಯಸ್ಥರು ಡಾ. ಟಿ. ಜೆ. ರಮೇಶ ಮಾತನಾಡಿ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಮತ್ತು ಮೀನು ಸೇವನೆಯ ಪ್ರಾಮುಖ್ಯತೆಯ ಕುರಿತ ಉಪನ್ಯಾಸವನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಸ್ತ್ರೀ ಶಕ್ತಿ ಬಳಗದ ಅಧ್ಯಕ್ಷರಾದ ಹರಿಣಿ ಮಾತನಾಡಿದರು.


ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ.ರಶ್ಮಿ.ಆರ್. ಮಾತನಾಡಿ, ಕೈತೋಟದ ನಿರ್ಮಾಣ ಒಂದು ಕಲೆ,ಇದೊಂದು ಉತ್ತಮ ಹವ್ಯಾಸವೂ ಹೌದು. ಇದನ್ನು ಅತ್ಯಂತ ಕಡಿಮೆ ವೆಚ್ಚ ಹಾಗೂ ಶ್ರಮದಿಂದ ಮಾಡಿದರೆ ಹೆಚ್ಚು ಪ್ರತಿಫಲ ಕೊಡುತ್ತದೆ. ಕೈತೋಟ ಮಾಡಲು ಉಪಯೋಗಿಸುವ ಕಾಲ ಮತ್ತು ಶ್ರಮದಾನ ನಮಗೆ ಉತ್ತಮ ಆರೋಗ್ಯ ನೀಡುವುದಲ್ಲದೆ ಅಲ್ಪ ಸ್ವಲ್ಪ ಆದಾಯವನ್ನು ನೀಡಬಲ್ಲರು. ಕಡಿಮೆ ದುಡ್ಡಿನಲ್ಲಿ ಸ್ವಲ್ಪ ಸ್ಥಳಾವಕಾಶದಲ್ಲಿ ಉತ್ಕೃಷ್ಟ ಮತ್ತು ಅಧಿಕ ಪೌಷ್ಠಿಕತೆಯ ತರಕಾರಿಗಳ ಉತ್ಪಾದನೆ ಬಹಳ ಮಹತ್ವವಸಿಕೊಂಡಿದೆ.ಎಂದು ಕೈತೋಟದ ಪ್ರಾಮುಖ್ಯತೆ ಮತ್ತು ಜೈವಿಕ ಬಲವರ್ಧಿತ ತಳಿಗಳು ಮತ್ತು ಸಿರಿ ದ್ಯಾನಗಳ ಪಾತ್ರದ ಬಗ್ಗೆ ಅರಿವು ಮೂಡಿಸಿದರು.

ಕೃಷಿ ವಿಜ್ಞಾನ ಕೇಂದ್ರದ ವಿಜಿತ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ 100 ತರಕಾರಿ ಬೀಜಗಳ ಪ್ಯಾಕೆಟ್,15 ಪಪ್ಪಾಯ ಸಸಿಗಳನ್ನು ಇಪ್ಕೋ ವತಿಯಿಂದ ವಿತರಿಸಿ ಮತ್ತು ತೆಂಗಿನ ಸಸಿ ನೆಡುವ ಮೂಲಕ ಪೋಷಣ
ಅಭಿಯಾನ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು. ಕಾರ್ಯಕ್ರಮದಲ್ಲಿ 141 ಆಶಾ ಕಾರ್ಯಕರ್ತೆಯರು, ಸ್ತ್ರೀ ಸಂಘ ಮಹಿಳೆಯರು, ಕೃಷಿಕರು, ರೈತ ಮಹಿಳೆಯರು, ಪರಿಕರ ಮಾರಾಟಗಾರರು, ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು