9:19 PM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಕನ್ನಡ ಚಿತ್ರರಂಗದ ರಾಣಿ ಜೇನು ರಮ್ಯಾ ಬಿಜೆಪಿ ಸೇರ್ತಾರಾ?: ಹಳೆ ಮೈಸೂರು ಭಾಗದಲ್ಲಿ ಕಮಲ ಬಲವರ್ಧನೆಗೆ ಕೇಸರಿ ಪಾಳಯ ಬಳಸುತ್ತಾ?

19/09/2022, 22:37

ಬೆಂಗಳೂರು (reporterkarnatak.com) : ಕನ್ನಡ ಚಿತ್ರರಂಗದ ರಾಣಿಜೇನು, ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ತ್ಯಜಿಸಿ ಕೇಸರಿ ಪಾಳಯದ ಬಿಜೆಪಿ ಸೇರ್ತಾರಾ? ಇಂತಹ ಒಂದು ಗುಸು ಗುಸು ರಾಜಧಾನಿ ಬೆಂಗಳೂರು ಮತ್ತು ಸಕ್ಕರೆ ನಾಡು ಮಂಡ್ಯದಲ್ಲಿ ಹರಿದಾಡಲಾರಂಭಿಸಿದೆ.

ರಾಜ್ಯ ರಾಜಕಾರಣದಲ್ಲಿ ಮಿಂಚಿನಂತೆ ಕಾಣಿಸಿಕೊಂಡು ಸಂಚಲನ ಸೃಷ್ಟಿಸಿ ಅಷ್ಟೇ ವೇಗದಲ್ಲಿ ಮರೆಯಾದ ಮಾಜಿ ಸಂಸದೆ ರಮ್ಯಾ ಇದೀಗ ಬಿಜೆಪಿ ಸೇರಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಪಕ್ಷದೊಳಗೆ ಕಡೆಗಣನೆಗೆ ಒಳಗಾದಂತೆ ಕಂಡುಬಂದಿರುವ ಅವರು ಕಮಲ ಪಾಳಯದೊಳಗೆ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕಿಳಿದಿದ್ದಾರೆ ಎನ್ನಲಾಗಿದೆ.

ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುವುದಕ್ಕೆ ಇನ್ನೂ ಮೀನಮೇಷ ಎಣಿಸುತ್ತಿದ್ದಾರೆ. ಪಕ್ಷ ಸೇರ್ಪಡೆ ಕುರಿತು ಸ್ಪಷ್ಟತೀರ್ಮಾನ ಕೈಗೊಳ್ಳಲಾಗದೆ ಗೊಂದಲದಲ್ಲಿದ್ದಾರೆ. ಸುಮಲತಾ ಸೇರ್ಪಡೆ ವಿಚಾರ ಇನ್ನೂ ರಾಷ್ಟ್ರ ನಾಯಕರ ಹಂತದಲ್ಲಿದೆ. ಆ ಮಾತುಕತೆ ಮುರಿದುಬಿದ್ದರೆ ರಮ್ಯಾ ಬಿಜೆಪಿ ಸೇರುವುದಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಬಹುದು ಎಂದು ಹೇಳಲಾಗುತ್ತಿದೆ. ರಮ್ಯಾ ಬಿಜೆಪಿ ಸೇರುವ ವಿಚಾರವಿನ್ನೂ ಪ್ರಾಥಮಿಕ ಹಂತದಲ್ಲಿದೆ. ಇನ್ನೂ ಈ ಬಗ್ಗೆ ಎರಡು ಮೂರು ಸುತ್ತಿನ ಮಾತುಕತೆಗಳು ನಡೆಯಬೇಕಿದೆ. ಅಲ್ಲಿಯವರೆಗೂ ಸ್ಪಷ್ಟಚಿತ್ರಣ ಸಿಗುವುದು ಕಷ್ಟ.

ರಮ್ಯಾ ವರ್ಚಸ್ಸು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲವರ್ಧನೆಗೊಳಿಸುವ ಉತ್ಸಾಹದಲ್ಲಿರುವ ಬಿಜೆಪಿ ನಾಯಕರು ರಮ್ಯಾ ಅವರನ್ನು ಒಂದು ಆಯ್ಕೆಯಾಗಿ ಇಟ್ಟುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಾಜಿ ಸಂಸದೆಯಾಗಿರುವ ರಮ್ಯಾ ವರ್ಚಸ್ವಿ ನಾಯಕಿಯಾಗಿದ್ದಾರೆ. ಆರು ತಿಂಗಳ ಅಲ್ಪಾವಧಿಯಲ್ಲಿ ಜಿಲ್ಲೆಯೊಳಗೆ ಗಮನಸೆಳೆಯುವಂತಹ ಕಾರ್ಯಗಳನ್ನು ಮಾಡುವುದರೊಂದಿಗೆ ಜನಪ್ರಿಯತೆ ಗಳಿಸಿಕೊಂಡಿದ್ದರು. ಆದರೆ, 2015ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ರಮ್ಯಾ ಸೋಲಿಗೆ ಕಾರಣವಾಗಿ ಜಿಲ್ಲೆಯಿಂದ ನಿರ್ಗಮಿಸುವಂತೆ ಮಾಡಿತು.

ಇತ್ತೀಚಿನ ಸುದ್ದಿ

ಜಾಹೀರಾತು