12:28 PM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಕನ್ನಡ ಚಿತ್ರರಂಗದ ರಾಣಿ ಜೇನು ರಮ್ಯಾ ಬಿಜೆಪಿ ಸೇರ್ತಾರಾ?: ಹಳೆ ಮೈಸೂರು ಭಾಗದಲ್ಲಿ ಕಮಲ ಬಲವರ್ಧನೆಗೆ ಕೇಸರಿ ಪಾಳಯ ಬಳಸುತ್ತಾ?

19/09/2022, 22:37

ಬೆಂಗಳೂರು (reporterkarnatak.com) : ಕನ್ನಡ ಚಿತ್ರರಂಗದ ರಾಣಿಜೇನು, ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ತ್ಯಜಿಸಿ ಕೇಸರಿ ಪಾಳಯದ ಬಿಜೆಪಿ ಸೇರ್ತಾರಾ? ಇಂತಹ ಒಂದು ಗುಸು ಗುಸು ರಾಜಧಾನಿ ಬೆಂಗಳೂರು ಮತ್ತು ಸಕ್ಕರೆ ನಾಡು ಮಂಡ್ಯದಲ್ಲಿ ಹರಿದಾಡಲಾರಂಭಿಸಿದೆ.

ರಾಜ್ಯ ರಾಜಕಾರಣದಲ್ಲಿ ಮಿಂಚಿನಂತೆ ಕಾಣಿಸಿಕೊಂಡು ಸಂಚಲನ ಸೃಷ್ಟಿಸಿ ಅಷ್ಟೇ ವೇಗದಲ್ಲಿ ಮರೆಯಾದ ಮಾಜಿ ಸಂಸದೆ ರಮ್ಯಾ ಇದೀಗ ಬಿಜೆಪಿ ಸೇರಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಪಕ್ಷದೊಳಗೆ ಕಡೆಗಣನೆಗೆ ಒಳಗಾದಂತೆ ಕಂಡುಬಂದಿರುವ ಅವರು ಕಮಲ ಪಾಳಯದೊಳಗೆ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕಿಳಿದಿದ್ದಾರೆ ಎನ್ನಲಾಗಿದೆ.

ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುವುದಕ್ಕೆ ಇನ್ನೂ ಮೀನಮೇಷ ಎಣಿಸುತ್ತಿದ್ದಾರೆ. ಪಕ್ಷ ಸೇರ್ಪಡೆ ಕುರಿತು ಸ್ಪಷ್ಟತೀರ್ಮಾನ ಕೈಗೊಳ್ಳಲಾಗದೆ ಗೊಂದಲದಲ್ಲಿದ್ದಾರೆ. ಸುಮಲತಾ ಸೇರ್ಪಡೆ ವಿಚಾರ ಇನ್ನೂ ರಾಷ್ಟ್ರ ನಾಯಕರ ಹಂತದಲ್ಲಿದೆ. ಆ ಮಾತುಕತೆ ಮುರಿದುಬಿದ್ದರೆ ರಮ್ಯಾ ಬಿಜೆಪಿ ಸೇರುವುದಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಬಹುದು ಎಂದು ಹೇಳಲಾಗುತ್ತಿದೆ. ರಮ್ಯಾ ಬಿಜೆಪಿ ಸೇರುವ ವಿಚಾರವಿನ್ನೂ ಪ್ರಾಥಮಿಕ ಹಂತದಲ್ಲಿದೆ. ಇನ್ನೂ ಈ ಬಗ್ಗೆ ಎರಡು ಮೂರು ಸುತ್ತಿನ ಮಾತುಕತೆಗಳು ನಡೆಯಬೇಕಿದೆ. ಅಲ್ಲಿಯವರೆಗೂ ಸ್ಪಷ್ಟಚಿತ್ರಣ ಸಿಗುವುದು ಕಷ್ಟ.

ರಮ್ಯಾ ವರ್ಚಸ್ಸು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲವರ್ಧನೆಗೊಳಿಸುವ ಉತ್ಸಾಹದಲ್ಲಿರುವ ಬಿಜೆಪಿ ನಾಯಕರು ರಮ್ಯಾ ಅವರನ್ನು ಒಂದು ಆಯ್ಕೆಯಾಗಿ ಇಟ್ಟುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಾಜಿ ಸಂಸದೆಯಾಗಿರುವ ರಮ್ಯಾ ವರ್ಚಸ್ವಿ ನಾಯಕಿಯಾಗಿದ್ದಾರೆ. ಆರು ತಿಂಗಳ ಅಲ್ಪಾವಧಿಯಲ್ಲಿ ಜಿಲ್ಲೆಯೊಳಗೆ ಗಮನಸೆಳೆಯುವಂತಹ ಕಾರ್ಯಗಳನ್ನು ಮಾಡುವುದರೊಂದಿಗೆ ಜನಪ್ರಿಯತೆ ಗಳಿಸಿಕೊಂಡಿದ್ದರು. ಆದರೆ, 2015ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ರಮ್ಯಾ ಸೋಲಿಗೆ ಕಾರಣವಾಗಿ ಜಿಲ್ಲೆಯಿಂದ ನಿರ್ಗಮಿಸುವಂತೆ ಮಾಡಿತು.

ಇತ್ತೀಚಿನ ಸುದ್ದಿ

ಜಾಹೀರಾತು