10:24 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಕನ್ನಡ ಚಿತ್ರರಂಗದ ರಾಣಿ ಜೇನು ರಮ್ಯಾ ಬಿಜೆಪಿ ಸೇರ್ತಾರಾ?: ಹಳೆ ಮೈಸೂರು ಭಾಗದಲ್ಲಿ ಕಮಲ ಬಲವರ್ಧನೆಗೆ ಕೇಸರಿ ಪಾಳಯ ಬಳಸುತ್ತಾ?

19/09/2022, 22:37

ಬೆಂಗಳೂರು (reporterkarnatak.com) : ಕನ್ನಡ ಚಿತ್ರರಂಗದ ರಾಣಿಜೇನು, ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ತ್ಯಜಿಸಿ ಕೇಸರಿ ಪಾಳಯದ ಬಿಜೆಪಿ ಸೇರ್ತಾರಾ? ಇಂತಹ ಒಂದು ಗುಸು ಗುಸು ರಾಜಧಾನಿ ಬೆಂಗಳೂರು ಮತ್ತು ಸಕ್ಕರೆ ನಾಡು ಮಂಡ್ಯದಲ್ಲಿ ಹರಿದಾಡಲಾರಂಭಿಸಿದೆ.

ರಾಜ್ಯ ರಾಜಕಾರಣದಲ್ಲಿ ಮಿಂಚಿನಂತೆ ಕಾಣಿಸಿಕೊಂಡು ಸಂಚಲನ ಸೃಷ್ಟಿಸಿ ಅಷ್ಟೇ ವೇಗದಲ್ಲಿ ಮರೆಯಾದ ಮಾಜಿ ಸಂಸದೆ ರಮ್ಯಾ ಇದೀಗ ಬಿಜೆಪಿ ಸೇರಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಪಕ್ಷದೊಳಗೆ ಕಡೆಗಣನೆಗೆ ಒಳಗಾದಂತೆ ಕಂಡುಬಂದಿರುವ ಅವರು ಕಮಲ ಪಾಳಯದೊಳಗೆ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕಿಳಿದಿದ್ದಾರೆ ಎನ್ನಲಾಗಿದೆ.

ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುವುದಕ್ಕೆ ಇನ್ನೂ ಮೀನಮೇಷ ಎಣಿಸುತ್ತಿದ್ದಾರೆ. ಪಕ್ಷ ಸೇರ್ಪಡೆ ಕುರಿತು ಸ್ಪಷ್ಟತೀರ್ಮಾನ ಕೈಗೊಳ್ಳಲಾಗದೆ ಗೊಂದಲದಲ್ಲಿದ್ದಾರೆ. ಸುಮಲತಾ ಸೇರ್ಪಡೆ ವಿಚಾರ ಇನ್ನೂ ರಾಷ್ಟ್ರ ನಾಯಕರ ಹಂತದಲ್ಲಿದೆ. ಆ ಮಾತುಕತೆ ಮುರಿದುಬಿದ್ದರೆ ರಮ್ಯಾ ಬಿಜೆಪಿ ಸೇರುವುದಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಬಹುದು ಎಂದು ಹೇಳಲಾಗುತ್ತಿದೆ. ರಮ್ಯಾ ಬಿಜೆಪಿ ಸೇರುವ ವಿಚಾರವಿನ್ನೂ ಪ್ರಾಥಮಿಕ ಹಂತದಲ್ಲಿದೆ. ಇನ್ನೂ ಈ ಬಗ್ಗೆ ಎರಡು ಮೂರು ಸುತ್ತಿನ ಮಾತುಕತೆಗಳು ನಡೆಯಬೇಕಿದೆ. ಅಲ್ಲಿಯವರೆಗೂ ಸ್ಪಷ್ಟಚಿತ್ರಣ ಸಿಗುವುದು ಕಷ್ಟ.

ರಮ್ಯಾ ವರ್ಚಸ್ಸು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲವರ್ಧನೆಗೊಳಿಸುವ ಉತ್ಸಾಹದಲ್ಲಿರುವ ಬಿಜೆಪಿ ನಾಯಕರು ರಮ್ಯಾ ಅವರನ್ನು ಒಂದು ಆಯ್ಕೆಯಾಗಿ ಇಟ್ಟುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಾಜಿ ಸಂಸದೆಯಾಗಿರುವ ರಮ್ಯಾ ವರ್ಚಸ್ವಿ ನಾಯಕಿಯಾಗಿದ್ದಾರೆ. ಆರು ತಿಂಗಳ ಅಲ್ಪಾವಧಿಯಲ್ಲಿ ಜಿಲ್ಲೆಯೊಳಗೆ ಗಮನಸೆಳೆಯುವಂತಹ ಕಾರ್ಯಗಳನ್ನು ಮಾಡುವುದರೊಂದಿಗೆ ಜನಪ್ರಿಯತೆ ಗಳಿಸಿಕೊಂಡಿದ್ದರು. ಆದರೆ, 2015ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ರಮ್ಯಾ ಸೋಲಿಗೆ ಕಾರಣವಾಗಿ ಜಿಲ್ಲೆಯಿಂದ ನಿರ್ಗಮಿಸುವಂತೆ ಮಾಡಿತು.

ಇತ್ತೀಚಿನ ಸುದ್ದಿ

ಜಾಹೀರಾತು