4:48 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಕಾನೂನು ಉಲ್ಲಂಘಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ಬೈಕ್ ಚಲಾಯಿಸಿದ ಕಾನ್ ಸ್ಟೇಬಲ್!: ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!!

20/09/2022, 14:07

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ವನ್ ವೇ ನಲ್ಲಿ ಬೈಕ್ ಚಲಿಸಿಕೊಂಡು ಹೋದಾಗ ಟ್ರಾಫಿಕ್ ಪೊಲೀಸ್ ಅವರ ಫೋಟೋ ಕ್ಲಿಕ್ಕಿಸಿ ವೃತ್ತಿಧರ್ಮ ಮೆರೆದ ಘಟನೆ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

ನಗರದ ಹೃದಯಭಾಗವಾದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ಏಕಮುಖ ಸಂಚಾರ ರಸ್ತೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ಆರಾಮವಾಗಿ ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದರು. ಇದು ಬೇಲಿಯೇ ಎದ್ದು ಹೊಲ ಮೇಯ್ದ ಪ್ರಸಂಗವಾಗಿದ್ದು, ಆ ಜಾಗದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಪೊಲೀಸರೊಬ್ಬರು ಯಾವುದೇ ತಾರತಮ್ಯ ಮಾಡದೆ ಕಾನೂನು ಉಲ್ಲಂಘಿಸಿದ ಕಾನ್ ಸ್ಟೇಬಲ್ ಅವರ ಫೋಟೋ ಕ್ಲಿಕ್ಕಿಸಿದರು. ಪ್ರಾಮಾಣಿಕತೆ ಮೆರೆದ ಪೊಲೀಸ್ ಸಂದೀಪ್ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಗರದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ರಸ್ತೆ ಏಕಮುಖ ಸಂಚಾರ ಎಂದು ತಿಳಿದಿದ್ದರೂ, ಅರ್ಧ ಭಾಗ ಬ್ಯಾರಿಗೇಟ್ ಹಾಕಿದ್ದರೂ ಜನರು ಪೊಲೀಸರ  ಎದುರಲ್ಲೆ ವಾಹನಗಳಲ್ಲಿ ತೆರಳುತ್ತಾರೆ. 

ಪೊಲೀಸರೂ ಎಂದಿನಂತೆ ಮೊಬೈಲ್ ನಲ್ಲಿ ಫೋಟೋ ಕ್ಲಿಕ್ಕಿಸುತ್ತಾರೆ. ನಂತರ ಫೈನ್ ಹಾಕಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು