11:17 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಉದ್ದೀಪನ ಔಷಧ ಸೇವನೆ ಆರೋಪ: ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

20/09/2022, 15:29

ಹೊಸದಿಲ್ಲಿ(Reporterkarnataka.com):ಉದ್ದೀಪನ ಮದ್ದು ಸೇವನೆ ಹಿನ್ನೆಲೆಯ ಆರೋಪದ ಹಿನ್ನೆಲೆಯಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತೆ, ಹಿರಿಯ ಅಥ್ಲೇಟ್ ಎಂ. ಆರ್. ಪೂವಮ್ಮ ಅವರಿಗೆ 2 ವರ್ಷ ನಿಷೇಧ ಹೇರಲಾಗಿದೆ.

ಪಟಿಯಾಲದಲ್ಲಿ ಕಳೆದ ವರ್ಷ ಫೆಬ್ರವರಿ 18ರಂದು ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ ಸಮಯದಲ್ಲಿ ಪೂವಮ್ಮ ಅವರ ಡೋಪ್ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವಿಶ್ವ ಡೋಪಿಂಗ್ ವಿರೋಧಿ ಸಂಸ್ಥೆ ರದ್ದು ಮಾಡಿದ್ದ ಉತ್ತೇಜಕ ಮೀಥೈಲ್‌ ಹೆಕ್ಸಾನಿಯಮೈನ್‌  ತೆಗೆದುಕೊಂಡಿದ್ದು ಪಾಸಿಟಿವ್ ಬಂದ ಹಿನ್ನೆಲೆ ಈ ವರ್ಷದ ಜೂನ್‌ನಲ್ಲಿ ಅವರಿಗೆ ಎಡಿಎಪಿ 3 ತಿಂಗಳ ನಿಷೇಧ ಶಿಕ್ಷೆ ವಿಧಿಸಿತ್ತು . ಅಂದಿನಿಂದ ಅವರು ಸ್ಪರ್ಧಿಸಿದ್ದ ಎಲ್ಲ ಫಲಿತಾಂಶಗಳನ್ನು ಅಮಾನ್ಯಗೊಳಿಸಲಾಗುತ್ತದೆ. ಗೆದ್ದ ಪದಕಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಡಿಎಪಿ ಮುಖ್ಯಸ್ಥ ಅಭಿನವ್ ಮುಖರ್ಜಿ ತಿಳಿಸಿದ್ದಾರೆ.

ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (NADA) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು