1:30 PM Monday2 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳಿಂದ ದೂರವಿರಿ : ಡಾ. ರಾಜೇಶ್ ಆಳ್ವ

21/09/2022, 12:47

ಮಂಗಳೂರು(reporterkarnataka.com) : ಇಂದಿನ ಮಹಿಳೆಯರಲ್ಲಿ ಅತಿ ಹೆಚ್ಚು ಅಸ್ವಸ್ಥತೆಗಳಿಗೆ ಮೂಲಕ ಕಾರಣ ಪೋಷಣೆಗಳ ಮಾಹಿತಿ ಕೊರತೆ ಮತ್ತು ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳ ಬಳಕೆಯಾಗಿದೆ. ಆದುದರಿಂದ ಸಾಂಪ್ರದಾಯಿಕ ಸೌಂದರ್ಯ ವರ್ಧಕಗಳ ಬಳಕೆ ಮತ್ತು ಶರೀರಕ್ಕೆ ಬೇಕಾದ ಪೋಷಕಾಂಶಗಳ ಬಗ್ಗೆ  ಅರಿತುಕೊಳ್ಳುವಲ್ಲಿ ಮತ್ತು ಮಾಹಿತಿ ನೀಡುವಲ್ಲಿ ಬ್ಯೂಟಿ ಪಾರ್ಲರ್ ಗಳು ಕಾರ್ಯಪ್ರವೃತ್ತರಾಗುವುದು ಉಚಿತ ಎಂದು ಮಾರ್ಕ್ ಆಟ್ ಡೈರೆಕ್ಟ್ ನಿರ್ದೇಶಕ ಡಾ. ರಾಜೇಶ್ ಆಳ್ವ ಅಭಿಪ್ರಾಯಪಟ್ಟರು. 

ಅವರು ಕರ್ನಾಟಕ ಐಕ್ಯ ಪಾರ್ಲರ್ ಅಸೋಸಿಯೇಷನ್ ನೇತೃತ್ವದಲ್ಲಿ ಮತ್ತು ನೆಟ್ಸರ್ಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆದ ಒಂದು ದಿನದ ಉಚಿತ ಮೇಕಪ್ ನೋಡಿ ಕಲಿ ತರಬೇತಿ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. 

ಕಾರ್ಯಕ್ರಮದ ಉದ್ಘಾಟನೆಯನ್ನು ನೆಟ್ಸರ್ಫ್ ಪುಣೆ ಸಂಸ್ಥೆಯ ತರಬೇತುದಾರರಾದ ಬಾಲಚಂದ್ರ ಕಿರಣ್ ಲಾತ್ಕಾರ್ ನೆರವೇರಿಸಿದರು. ಕರ್ನಾಟಕ ಐಕ್ಯ ಪಾರ್ಲರ್ ಅಸೋಸಿಯೇಷನ್ ಅಧ್ಯಕ್ಷೆ ಪೌಲಿನ್ ಕ್ರಾಸ್ತಾ  ಅವರು ಅಧ್ಯಕ್ಷತೆ ವಹಿಸಿದರು.

ನಂತರ ನಡೆದ ತರಬೇತಿ ಶಿಬಿರದಲ್ಲಿ ಖ್ಯಾತ ಸೆಲೆಬ್ರಿಟಿ ಆರ್ಟಿಸ್ಟ್ ಪಂಕಜ ಬೆಂಗಳೂರು ಮೇಕಪ್ ನೋಡಿ ಕಲಿ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅದೇ ರೀತಿ ಶಾರದಾ ಜಲ್ಲಿ ಮತ್ತು ನೈಲ್ ಆರ್ಟ್ ಇವುಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಗೀತಾ ದಿನೇಶ್, ವನಿತಾ ರಾವ್, ಸೌಮ್ಯ ಶ್ರೀ, ಲೊತಿಸಿಲ ದಂತಿಸ್,  ಮುಂತಾದವರು ನಡೆಸಿಕೊಟ್ಟರು. ನೆಟ್ಸರ್ಫ್ ಸೌತ್ ಇಂಡಿಯಾ ಅಸ್ಮಿತಾ ಕೋ ಆರ್ಡಿನೇಟರ್ ರಮೊಲಅವರು ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಪರಿಹಾರ ಈ ಬಗ್ಗೆ ಮಾಹಿತಿ ನೀಡಿದರು. ಲತಾ ಹರೀಶ್ ಇವರು ಕಾರ್ಯಕ್ರಮ ನಿರ್ವಹಣೆ ಮಾಡಿ, ಪ್ರಮೀಳಾ ಪ್ರಸಾದ್ ಇವರು ಸ್ವಾಗತಿಸಿ. ಮಂಜುಳಾ ನಾಯಕ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು