7:17 PM Sunday9 - November 2025
ಬ್ರೇಕಿಂಗ್ ನ್ಯೂಸ್
ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ

ಇತ್ತೀಚಿನ ಸುದ್ದಿ

ಅನಂತಪುರ: ಅ.10ಕ್ಕೆ ‘ಪುವೆಂಪು ನೆಂಪು’ ತುಳು ಲಿಪಿ ದಿನಾಚರಣೆ: ಸರ್ವಾಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಅಬುಧಾಬಿ

21/09/2022, 12:55

ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ಪುವೆಂಪು ನೆಂಪು 2022 ಹಾಗೂ ತುಳು ಲಿಪಿ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 10ಕ್ಕೆ ಆನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ. 

ತುಳು ವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪುವೆಂಪು ಅಭಿಮಾನಿಗಳು ಆಯೋಜಿಸುವ ಕಾರ್ಯಕಮದ ಯಶಸ್ವಿಗಾಗಿ ಈಗಾಗಲೇ ಸ್ವಾಗತ ಸಮಿತಿ ರಚಿಸಲಾಗಿದ್ದು ಪುಣಿಂಚಿತ್ತಾಯರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಂಶೋಧಾನತ್ಮಕ ವಿಷಯಗಳನ್ನು ಪ್ರಸ್ತುತಪಡಿಸುವುದು ಕಾರ್ಯಕ್ರಮದ ಧ್ಯೆಯವಾಗಿದೆ. ಈ ಬಗ್ಗೆ ವಿಚಾರ ಗೋಷ್ಠಿ, ಸಾಹಿತ್ಯ ಗೋಷ್ಠಿ, ಪುವೆಂಪು ಸಮಕಾಲೀನ ಸಾಹಿತಿಗಳ ಸಮ್ಮಿಲನ, ಪುವೆಂಪು ರಚಿತ ನಾಟಕಗಳ ಪ್ರದರ್ಶನ ಹಾಗೂ ಅಭಿಮಾನಿಗಳ ವಿಚಾರ ಮಂಡನೆ,ಪುವೆಂಪು ಸಮ್ಮಾನ್ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಏಕ ದಿನ ಸಮ್ಮೇಳನ ಸರ್ವಾಧ್ಯಕ್ಷರಾಗಿ ಗಲ್ಫ್ ರಾಷ್ಟ್ರದ ತುಳು ಸಂಘಟಕ, ಸಾಹಿತ್ಯ, ಸಾಂಸ್ಕೃತಿಕ ಪ್ರೋತ್ಸಾಹಕ, ಮಾರ್ಗದರ್ಶಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ಆವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಸಮಿತಿ ತಿಳಿಸಿದೆ. 

ಈ ಹಿಂದೆ ಬದಿಯಡ್ಕದಲ್ಲಿ ನಡೆದ ವಿಶ್ವ ತುಳುವೆರೆ ಆಯನೋದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಸರ್ವೋತ್ತಮ ಶೆಟ್ಟಿ ಅವರು ಬಳಿಕ ಯುಎಇಯಲ್ಲೂ ತುಳುವೆರೆ ಆಯನೋ ನಡೆಸುವ ಮೂಲಕ ತುಳು ನಾಡು ನುಡಿ ಸಂಸ್ಕೃತಿಯ ಪ್ರೋತ್ಸಾಹಕ್ಕೆ ಕೊಡುಗೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು