7:19 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಅನಂತಪುರ: ಅ.10ಕ್ಕೆ ‘ಪುವೆಂಪು ನೆಂಪು’ ತುಳು ಲಿಪಿ ದಿನಾಚರಣೆ: ಸರ್ವಾಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಅಬುಧಾಬಿ

21/09/2022, 12:55

ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ಪುವೆಂಪು ನೆಂಪು 2022 ಹಾಗೂ ತುಳು ಲಿಪಿ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 10ಕ್ಕೆ ಆನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ. 

ತುಳು ವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪುವೆಂಪು ಅಭಿಮಾನಿಗಳು ಆಯೋಜಿಸುವ ಕಾರ್ಯಕಮದ ಯಶಸ್ವಿಗಾಗಿ ಈಗಾಗಲೇ ಸ್ವಾಗತ ಸಮಿತಿ ರಚಿಸಲಾಗಿದ್ದು ಪುಣಿಂಚಿತ್ತಾಯರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಂಶೋಧಾನತ್ಮಕ ವಿಷಯಗಳನ್ನು ಪ್ರಸ್ತುತಪಡಿಸುವುದು ಕಾರ್ಯಕ್ರಮದ ಧ್ಯೆಯವಾಗಿದೆ. ಈ ಬಗ್ಗೆ ವಿಚಾರ ಗೋಷ್ಠಿ, ಸಾಹಿತ್ಯ ಗೋಷ್ಠಿ, ಪುವೆಂಪು ಸಮಕಾಲೀನ ಸಾಹಿತಿಗಳ ಸಮ್ಮಿಲನ, ಪುವೆಂಪು ರಚಿತ ನಾಟಕಗಳ ಪ್ರದರ್ಶನ ಹಾಗೂ ಅಭಿಮಾನಿಗಳ ವಿಚಾರ ಮಂಡನೆ,ಪುವೆಂಪು ಸಮ್ಮಾನ್ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಏಕ ದಿನ ಸಮ್ಮೇಳನ ಸರ್ವಾಧ್ಯಕ್ಷರಾಗಿ ಗಲ್ಫ್ ರಾಷ್ಟ್ರದ ತುಳು ಸಂಘಟಕ, ಸಾಹಿತ್ಯ, ಸಾಂಸ್ಕೃತಿಕ ಪ್ರೋತ್ಸಾಹಕ, ಮಾರ್ಗದರ್ಶಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ಆವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಸಮಿತಿ ತಿಳಿಸಿದೆ. 

ಈ ಹಿಂದೆ ಬದಿಯಡ್ಕದಲ್ಲಿ ನಡೆದ ವಿಶ್ವ ತುಳುವೆರೆ ಆಯನೋದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಸರ್ವೋತ್ತಮ ಶೆಟ್ಟಿ ಅವರು ಬಳಿಕ ಯುಎಇಯಲ್ಲೂ ತುಳುವೆರೆ ಆಯನೋ ನಡೆಸುವ ಮೂಲಕ ತುಳು ನಾಡು ನುಡಿ ಸಂಸ್ಕೃತಿಯ ಪ್ರೋತ್ಸಾಹಕ್ಕೆ ಕೊಡುಗೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು