2:28 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಚಾಮರಾಜನಗರ: 50 ಸಾವಿರದಾಸೆಗೆ ಮಗು ಮಾರಾಟ; ದಂಪತಿ ಬಂಧನ

21/09/2022, 17:06

ಚಾಮರಾಜನಗರ(reporterkarnataka.com): ಹಣದಾಸೆಗೆ ಮಗುವನ್ನು ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬoಧಿಸಿ ಮಗುವಿನ ಪೋಷಕರನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಸಪ್ಪ (35) ಮತ್ತು ಆತನ ಪತ್ನಿ ನಾಗವೇಣಿ ಎಂಬಾಕೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತಮ್ಮ ಎರಡನೇ ಮಗುವನ್ನು ಬಸಪ್ಪ ಗಾಳೀಪುರದ ವ್ಯಕ್ತಿಯೊಬ್ಬನ ಮೂಲಕ ಬೆಂಗಳೂರಿನ ವ್ಯಕ್ತಿಗೆ 50 ಸಾವಿರ ರೂ.ಗೆ 6 ದಿನಗಳ ಹಿಂದೆ ಮಾರಾಟ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪತ್ನಿ ನಾಗವೇಣಿಗೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ತನಗೆ ಸಾಲದ ಹೊರೆ ಇದೆ. ಆದ್ದರಿಂದ ಮಗು ಮಾರಾಟ ಮಾಡೋಣ ಎಂದು ಬಸಪ್ಪ ಪತ್ನಿಯನ್ನು ಒತ್ತಾಯಿಸಿದ್ದು, ಇದಕ್ಕೆ ಪತ್ನಿ ಒಪ್ಪದಿದ್ದಾಗ ತಾನು ಮನೆ ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿ ಮಗುವನ್ನು ಮಾರಾಟ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ದಂಪತಿಗೆ 7 ವರ್ಷದ ಒಬ್ಬ ಮಗನಿದ್ದು, ಒಂದು ದಿನಗಳ ಹಿಂದೆ ನಾಗವೇಣಿ ಎರಡನೇ ಗಂಡು ಮಗುವಿಗೆ ಜನ್ಮವಿತ್ತಿದ್ದಳು. ಹೆರಿಗೆಯಾಗಿ ಮನೆಗೆ ಬಂದ 28 ದಿನಗಳಲ್ಲೇ ಬಸಪ್ಪ ತನ್ನ ಜೊತೆ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಗಾಳೀಪುರದ ವ್ಯಕ್ತಿಯೊಬ್ಬನನ್ನು ಕರೆತಂದು ಮೊಬೈಲ್‌ನಲ್ಲಿ ಮಗುವಿನ ಫೋಟೋ ತೆಗೆದುಕೊಂಡು ಹೋಗಿದ್ದ. ನಾಲ್ಕೆದು ದಿನಗಳ ನಂತರ ದಂಪತಿಯನ್ನು ಗಾಳೀಪುರದ ಮನೆಯೊಂದಕ್ಕೆ ಕರೆಸಿಕೊಂಡು ಮಗುವನ್ನು ಬೆಂಗಳೂರಿನ ವ್ಯಕ್ತಿಗೆ ಮಾರಾಟ ಮಾಡಲಾಯಿತು. ಬಸಪ್ಪನಿಗೆ 50 ಸಾವಿರ ರೂ. ನೀಡಲಾಗಿದೆ ಎಂದು ಮಹಿಳಾ ರಕ್ಷಣಾ ಘಟಕದ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು