7:25 AM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಲು ಸೂಚನೆ

21/09/2022, 21:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಕಾರ್ಯದರ್ಶಿ ಶಿವಕಾಶಿ ಯು.ಆರ್. ಹೇಳಿದರು.

ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲದೇ ಇರುವವರು ಅನಧಿಕೃತವಾಗಿ ವಾಹನಗಳಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಮತ್ತು ಯೆಲ್ಲೋ ಬೋರ್ಡ್ ವಾಹನದಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡು ಪತ್ರಕರ್ತರೆಂದು ಓಡಾಡಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಪತ್ರಕರ್ತರಲ್ಲದೇ ಇದ್ದರೂ ಕೂಡ ನಕಲಿ ಪ್ರೆಸ್ ಐಡಿ ಹೊಂದಿರುವುದು ಮತ್ತು ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸಾರ್ವಜನಿಕರು ಪತ್ರಕರ್ತರ ಸಂಘ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದರು. 

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾದ ಉದಯಶಂಕರ್, ಸದಸ್ಯರಾದ ಪ್ರಸನ್ನ ಗೌಡಹಳ್ಳಿ, ನಂದೀಶ್ ಬಂಕೇನಹಳ್ಳಿ, ಸೊಮಶೇಖರ್, ಶಾರದಶೇಖರ್, ಆನಂದ್ ಕಣಚೂರು, ವಿಜಯಕುಮಾರ್, ಪ್ರವೀಣ್ ಪೂಜಾರಿ, ಸಂತೋಷ್ ಅತ್ತಿಗೆರೆ, ಪ್ರಕಾಶ್ ಬಿ.ಪಿ, ತನು ಕೊಟ್ಟಿಗೆಹಾರ, ನಯನ ತಳವಾರ, ಅಮರನಾಥ್, ಪ್ರಸನ್ನಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು