9:14 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ಕೋಲಾರದ ನಿವಾಸಿಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದರು

21/09/2022, 21:57

ಉಡುಪಿ(reporterkarnataka.com) : ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ‌ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು 
ರಕ್ಷಿಸಿದ ಘಟನೆ ನಗರದಲ್ಲಿ ನಡೆದಿದೆ.

ಕೋಲಾರ ನಿವಾಸಿ ಅಣ್ಣಪ್ಪಯ್ಯ (76) ಎಂಬವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್ತಿರುವುದನ್ನು ಗಮನಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ಹಿರಿಯ ನಾಗರಿಕರ ಸಹಾಯವಾಣಿಯ ಸಿಬ್ಬಂದಿಗಳ ಸಹಾಯದಿಂದ ರಕ್ಷಿಸಿ, ಕುಟುಂಬದ ವಶಕ್ಕೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಮಾಜ ಸೇವಕ ವಿಶು ಶೆಟ್ಟಿ ಅಣ್ಣಪ್ಪಯ್ಯ ಅವರನ್ನು ಮೊದಲು ವಿಚಾರಿಸಿದಾಗ ಅಸ್ಪಷ್ಟ ಉತ್ತರ ನೀಡಿದ್ದರು. ಅನುಮಾನಗೊಂಡ ಅವರು ಕೂಡಲೇ ಉಡುಪಿಯ ಹಿರಿಯ ನಾಗರಿಕ ಸಹಾಯವಾಣಿಯ ಗಮನಕ್ಕೆ ತಂದರು. ಕೂಡಲೇ ಸ್ಪಂದಿಸಿದ ಸಹಾಯವಾಣಿಯ ಸಿಬ್ಬಂದಿಗಳು, ವ್ಯಕ್ತಿಯನ್ನು ವಿಶು ಶೆಟ್ಟಿ ಅವರ ವಾಹನದಲ್ಲಿ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.

ಆಶ್ರಮದ ಆರೈಕೆಯಿಂದ ಸಾಂತ್ವನಗೊಂಡ ಬಳಿಕ ಅಣ್ಣಪ್ಪಯ್ಯ ಅವರು ತಾವು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ನಡೆಸಲು ಮುಂದಾಗಿರುವ ವಿಷಯವನ್ನು ತಿಳಿಸಿದ್ದಾರೆ. ಕೊನೆಗೆ ಅವರಿಂದ ಮಗನ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡು ಮಾಹಿತಿ ನೀಡಿದಾಗ ತನ್ನ ತಂದೆ ಕಾಶಿಯಾತ್ರೆಗೆ ಹೋಗಿದ್ದಾರೆ ಎಂದು ಮಗ ಉತ್ತರಿಸಿದ್ದ.

ಆದರೆ ವಿಷಯದ ಗಂಭೀರತೆಯನ್ನು ಅರಿತ ಮಗ ಉಡುಪಿಗೆ ಬಂದು ತಂದೆಯನ್ನು ಊರಿಗೆ ಕರೆದುಕೊಂಡು ಹೋಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು