6:58 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ಕೋಲಾರದ ನಿವಾಸಿಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದರು

21/09/2022, 21:57

ಉಡುಪಿ(reporterkarnataka.com) : ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ‌ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು 
ರಕ್ಷಿಸಿದ ಘಟನೆ ನಗರದಲ್ಲಿ ನಡೆದಿದೆ.

ಕೋಲಾರ ನಿವಾಸಿ ಅಣ್ಣಪ್ಪಯ್ಯ (76) ಎಂಬವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್ತಿರುವುದನ್ನು ಗಮನಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ಹಿರಿಯ ನಾಗರಿಕರ ಸಹಾಯವಾಣಿಯ ಸಿಬ್ಬಂದಿಗಳ ಸಹಾಯದಿಂದ ರಕ್ಷಿಸಿ, ಕುಟುಂಬದ ವಶಕ್ಕೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಮಾಜ ಸೇವಕ ವಿಶು ಶೆಟ್ಟಿ ಅಣ್ಣಪ್ಪಯ್ಯ ಅವರನ್ನು ಮೊದಲು ವಿಚಾರಿಸಿದಾಗ ಅಸ್ಪಷ್ಟ ಉತ್ತರ ನೀಡಿದ್ದರು. ಅನುಮಾನಗೊಂಡ ಅವರು ಕೂಡಲೇ ಉಡುಪಿಯ ಹಿರಿಯ ನಾಗರಿಕ ಸಹಾಯವಾಣಿಯ ಗಮನಕ್ಕೆ ತಂದರು. ಕೂಡಲೇ ಸ್ಪಂದಿಸಿದ ಸಹಾಯವಾಣಿಯ ಸಿಬ್ಬಂದಿಗಳು, ವ್ಯಕ್ತಿಯನ್ನು ವಿಶು ಶೆಟ್ಟಿ ಅವರ ವಾಹನದಲ್ಲಿ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.

ಆಶ್ರಮದ ಆರೈಕೆಯಿಂದ ಸಾಂತ್ವನಗೊಂಡ ಬಳಿಕ ಅಣ್ಣಪ್ಪಯ್ಯ ಅವರು ತಾವು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ನಡೆಸಲು ಮುಂದಾಗಿರುವ ವಿಷಯವನ್ನು ತಿಳಿಸಿದ್ದಾರೆ. ಕೊನೆಗೆ ಅವರಿಂದ ಮಗನ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡು ಮಾಹಿತಿ ನೀಡಿದಾಗ ತನ್ನ ತಂದೆ ಕಾಶಿಯಾತ್ರೆಗೆ ಹೋಗಿದ್ದಾರೆ ಎಂದು ಮಗ ಉತ್ತರಿಸಿದ್ದ.

ಆದರೆ ವಿಷಯದ ಗಂಭೀರತೆಯನ್ನು ಅರಿತ ಮಗ ಉಡುಪಿಗೆ ಬಂದು ತಂದೆಯನ್ನು ಊರಿಗೆ ಕರೆದುಕೊಂಡು ಹೋಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು