10:18 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ದಕ್ಷಿಣಕನ್ನಡ ಜಿಲ್ಲಾದ್ಯಂತ ಪಿಎಫ್ ಐ ನಾಯಕರ ಮನೆಗಳಿಗೆ ಎನ್ ಐಎ ದಾಳಿ: ಭಾರಿ ಪ್ರತಿಭಟನೆ

22/09/2022, 10:51

ಮಂಗಳೂರು(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ದ.ಕ. ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು
ದಾಳಿ ನಡೆಸಿದ್ದಾರೆ.
ರಾಜ್ಯ ಪಿಎಫ್ ಐ ನಾಯಕರ ಮನೆ ಮೇಲೆ ಕೆಲವು ದಿನಗಳಿಂದ ದಾಳಿ ನಡೆಸುತ್ತಿರುವ ಎನ್ಐಎ ಗುರುವಾರ ಬೆಳಗ್ಗೆ ಮಂಗಳೂರು ಹೊರವಲಯದ ಕಾವೂರು, ಬಜ್ಪೆ, ಜೋಕಟ್ಟೆ, ಸ್ಟೇಟ್ ಬ್ಯಾಂಕ್, ಕುಳಾಯಿ ಸೇರಿದಂತೆ ಕೆಲವೆಡೆ ರಾಜ್ಯ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದೆ.
ನಾಯಕರ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಮನೆ ಮುಂಭಾಗ ಪಿಎಫ್ಐ ಕಾರ್ಯಕರ್ತರು ಜಮಾಯಿಸಿದ್ದು, ಗೋ ಬ್ಯಾಕ್ ಎನ್ಐಎ ಘೋಷಣೆ ಕೂಗಿ, ಇದು ಸರಕಾರಿ ದಾಳಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಉಪ್ಪಿನಂಗಡಿ, ಬೋಳಂತೂರುನಲ್ಲಿಯೂ ದಾಳಿ ನಡೆದ ಬಗ್ಗೆ ವರದಿಯಾಗಿದ್ದು, ಪಿಎಫ್ಐ ನಾಯಕರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ವಿವಿಧ ವಾಹನಗಳಲ್ಲಿ ಆಗಮಿಸಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಜಮಾಯಿಸಿ ಎನ್ ಐಎ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು