5:32 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನ ಆಚರಣೆ

22/09/2022, 12:10

ಮಂಗಳೂರು(reporterkarnataka.com): ನಗರದ ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಆಕರ್ಷಕ ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮವು ಆರಂಭವಾಯಿತು. ಕೆನರಾ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಅತಿಥಿಗಳಾಗಿ ಆಗಮಿಸಿದ್ದು, ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಎಂ. ರಂಗನಾಥ ಭಟ್, ಜನ ಸಂಪರ್ಕ ಅಧಿಕಾರಿ ಉಜ್ವಲ್ ಮಲ್ಯ ಅವರು ಉಪಸ್ಥಿತರಿದ್ದರು. ಲಯನ್ಸ್ ಕ್ವೆಸ್ಟ್ ನ ಸಂಘಟಕರಾದ ಮಂದಾಕಿನಿ ಉಪಾಧ್ಯಾಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸುರೇಖಾ ಪೈ ಅವರು ಧ್ಯಾನವನ್ನು ಮಾಡಿಸುವ ಮೂಲಕ ಎಲ್ಲರಿಗೂ ಆತ್ಮ ಶಾಂತಿಯ ಅನುಭವವನ್ನು ಮನಗಾಣಿಸಿದರು.  ರಾಧಾಕೃಷ್ಣ ಐತಾಳ್ ಅವರು ಮಾತನಾಡಿ ವೈಯಕ್ತಿಕ ಮಟ್ಟದಲ್ಲಿ ಶಾಂತಿಯನ್ನು ಪರಿಪಾಲಿಸಲು ಅಗತ್ಯವಾದ ಸಲಹೆಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಅಂಧಕಾರದಿಂದ ಮೇಲೆದ್ದು ಬೆಳಕಿನೆಡೆಗೆ ನಮ್ಮ ಜೀವನವು ಸಾಗಬೇಕೆಂದು ಹಾರೈಸಿದರು. ಶಾಲಾ ಮುಕ್ಷೋಪಾಧ್ಯಾಯನಿಯಾದ ಲಲನಾ ಜೆ.ಶೆಣೈ ಅವರು ಉಪಸ್ಥಿತರಿದ್ದರು. 

ವಿದ್ಯಾರ್ಥಿ ಶ್ರಿಹಾನ್ ಶೆಣೈ ನಿರೂಪಿಸಿದರು. ಶಾಲಾ ನಾಯಕಿ ಕ್ಷಿತಿ ಪ್ರಭು ಸ್ವಾಗತಿಸಿ, ವಿದ್ಯಾರ್ಥಿಯಾದ ಸಾಯಿ ರಾಜ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು