2:07 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನ ಆಚರಣೆ

22/09/2022, 12:10

ಮಂಗಳೂರು(reporterkarnataka.com): ನಗರದ ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಆಕರ್ಷಕ ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮವು ಆರಂಭವಾಯಿತು. ಕೆನರಾ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಅತಿಥಿಗಳಾಗಿ ಆಗಮಿಸಿದ್ದು, ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಎಂ. ರಂಗನಾಥ ಭಟ್, ಜನ ಸಂಪರ್ಕ ಅಧಿಕಾರಿ ಉಜ್ವಲ್ ಮಲ್ಯ ಅವರು ಉಪಸ್ಥಿತರಿದ್ದರು. ಲಯನ್ಸ್ ಕ್ವೆಸ್ಟ್ ನ ಸಂಘಟಕರಾದ ಮಂದಾಕಿನಿ ಉಪಾಧ್ಯಾಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸುರೇಖಾ ಪೈ ಅವರು ಧ್ಯಾನವನ್ನು ಮಾಡಿಸುವ ಮೂಲಕ ಎಲ್ಲರಿಗೂ ಆತ್ಮ ಶಾಂತಿಯ ಅನುಭವವನ್ನು ಮನಗಾಣಿಸಿದರು.  ರಾಧಾಕೃಷ್ಣ ಐತಾಳ್ ಅವರು ಮಾತನಾಡಿ ವೈಯಕ್ತಿಕ ಮಟ್ಟದಲ್ಲಿ ಶಾಂತಿಯನ್ನು ಪರಿಪಾಲಿಸಲು ಅಗತ್ಯವಾದ ಸಲಹೆಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಅಂಧಕಾರದಿಂದ ಮೇಲೆದ್ದು ಬೆಳಕಿನೆಡೆಗೆ ನಮ್ಮ ಜೀವನವು ಸಾಗಬೇಕೆಂದು ಹಾರೈಸಿದರು. ಶಾಲಾ ಮುಕ್ಷೋಪಾಧ್ಯಾಯನಿಯಾದ ಲಲನಾ ಜೆ.ಶೆಣೈ ಅವರು ಉಪಸ್ಥಿತರಿದ್ದರು. 

ವಿದ್ಯಾರ್ಥಿ ಶ್ರಿಹಾನ್ ಶೆಣೈ ನಿರೂಪಿಸಿದರು. ಶಾಲಾ ನಾಯಕಿ ಕ್ಷಿತಿ ಪ್ರಭು ಸ್ವಾಗತಿಸಿ, ವಿದ್ಯಾರ್ಥಿಯಾದ ಸಾಯಿ ರಾಜ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು