11:18 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನ ಆಚರಣೆ

22/09/2022, 12:10

ಮಂಗಳೂರು(reporterkarnataka.com): ನಗರದ ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಆಕರ್ಷಕ ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮವು ಆರಂಭವಾಯಿತು. ಕೆನರಾ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಅತಿಥಿಗಳಾಗಿ ಆಗಮಿಸಿದ್ದು, ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಎಂ. ರಂಗನಾಥ ಭಟ್, ಜನ ಸಂಪರ್ಕ ಅಧಿಕಾರಿ ಉಜ್ವಲ್ ಮಲ್ಯ ಅವರು ಉಪಸ್ಥಿತರಿದ್ದರು. ಲಯನ್ಸ್ ಕ್ವೆಸ್ಟ್ ನ ಸಂಘಟಕರಾದ ಮಂದಾಕಿನಿ ಉಪಾಧ್ಯಾಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸುರೇಖಾ ಪೈ ಅವರು ಧ್ಯಾನವನ್ನು ಮಾಡಿಸುವ ಮೂಲಕ ಎಲ್ಲರಿಗೂ ಆತ್ಮ ಶಾಂತಿಯ ಅನುಭವವನ್ನು ಮನಗಾಣಿಸಿದರು.  ರಾಧಾಕೃಷ್ಣ ಐತಾಳ್ ಅವರು ಮಾತನಾಡಿ ವೈಯಕ್ತಿಕ ಮಟ್ಟದಲ್ಲಿ ಶಾಂತಿಯನ್ನು ಪರಿಪಾಲಿಸಲು ಅಗತ್ಯವಾದ ಸಲಹೆಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಅಂಧಕಾರದಿಂದ ಮೇಲೆದ್ದು ಬೆಳಕಿನೆಡೆಗೆ ನಮ್ಮ ಜೀವನವು ಸಾಗಬೇಕೆಂದು ಹಾರೈಸಿದರು. ಶಾಲಾ ಮುಕ್ಷೋಪಾಧ್ಯಾಯನಿಯಾದ ಲಲನಾ ಜೆ.ಶೆಣೈ ಅವರು ಉಪಸ್ಥಿತರಿದ್ದರು. 

ವಿದ್ಯಾರ್ಥಿ ಶ್ರಿಹಾನ್ ಶೆಣೈ ನಿರೂಪಿಸಿದರು. ಶಾಲಾ ನಾಯಕಿ ಕ್ಷಿತಿ ಪ್ರಭು ಸ್ವಾಗತಿಸಿ, ವಿದ್ಯಾರ್ಥಿಯಾದ ಸಾಯಿ ರಾಜ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು