12:31 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮೆದುಳು ನಿಷ್ಕ್ರಿಯಗೊಂಡ ಪಿಯು ವಿದ್ಯಾರ್ಥಿನಿಯ ಹೃದಯ ಬೆಂಗಳೂರಿಗೆ ರವಾನೆ: ಅಗಲಿದ ಗೆಳತಿಗೆ ಬಸವನಹಳ್ಳಿಯಲ್ಲಿ ಕಣ್ಣೀರಿನ ವಿದಾಯ

22/09/2022, 18:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೆದುಳು ನಿಷ್ಕ್ರಿಯವಾಗಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾಳ ಹೃದಯವನ್ನು ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ರವಾನಿಸಲಾಯಿತು. ಈ ಮಧ್ಯೆ ಬಸವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅಗಲಿದ ಗೆಳತಿಗೆ ಕಣ್ಣೀರ ವಿದಾಯ ಹೇಳಿದರು.ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೃದಯ ರವಾನೆ ಮಾಡಲಾಯಿತು.
ಬಸ್ಸಿನಿಂದ ಬಿದ್ದು ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾಳ ಮೆದುಳು ನಿಷ್ಕ್ರಿಯಗೊಂಡಿತ್ತು. ವಿದ್ಯಾರ್ಥಿನಿಯ ಒಟ್ಟು ಒಂಬತ್ತು ಅಂಗಗಳನ್ನ ಕುಟುಂಬಸ್ಥರು ದಾನ ಮಾಡಿದ್ದಾರೆ.

ಇತ್ತ ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ರಕ್ಷಿತಾ ಗೆ ಸಾವಿರಾರು ವಿದ್ಯಾರ್ಥಿನಿಯರಿಂದ ಕಣ್ಣೀರಿನ ವಿದಾಯ ಹೇಳಿದರು.


ಸ್ನೇಹಿತೆಯನ್ನು ಕಳೆದುಕೊಂಡು ವಿದ್ಯಾರ್ಥಿನಿಯರು ಬಿಕ್ಕಳಿಸಿ ಬಿಕ್ಕಳಿಸಿ ಅತ್ತು ಬಿಟ್ಟರು. ರಕ್ಷಿತಾಳ ಪಾರ್ಥಿವ ಶರೀರ ಕಂಡು ವಿದ್ಯಾರ್ಥಿನಿಯರ ಜತೆ ಶಿಕ್ಷಕರು, ಸಾರ್ವಜನಿಕರು ಕಣ್ಣೀರು ಹಾಕಿದರು.ಚಿಕ್ಕಮಗಳೂರು ನಗರದಿಂದ ಸ್ವಗ್ರಾಮಕ್ಕೆ ರಕ್ಷಿತಾ ಮೃತದೇಹ ರವಾನೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು