1:46 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಮೆದುಳು ನಿಷ್ಕ್ರಿಯಗೊಂಡ ಪಿಯು ವಿದ್ಯಾರ್ಥಿನಿಯ ಹೃದಯ ಬೆಂಗಳೂರಿಗೆ ರವಾನೆ: ಅಗಲಿದ ಗೆಳತಿಗೆ ಬಸವನಹಳ್ಳಿಯಲ್ಲಿ ಕಣ್ಣೀರಿನ ವಿದಾಯ

22/09/2022, 18:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೆದುಳು ನಿಷ್ಕ್ರಿಯವಾಗಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾಳ ಹೃದಯವನ್ನು ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ರವಾನಿಸಲಾಯಿತು. ಈ ಮಧ್ಯೆ ಬಸವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅಗಲಿದ ಗೆಳತಿಗೆ ಕಣ್ಣೀರ ವಿದಾಯ ಹೇಳಿದರು.ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೃದಯ ರವಾನೆ ಮಾಡಲಾಯಿತು.
ಬಸ್ಸಿನಿಂದ ಬಿದ್ದು ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾಳ ಮೆದುಳು ನಿಷ್ಕ್ರಿಯಗೊಂಡಿತ್ತು. ವಿದ್ಯಾರ್ಥಿನಿಯ ಒಟ್ಟು ಒಂಬತ್ತು ಅಂಗಗಳನ್ನ ಕುಟುಂಬಸ್ಥರು ದಾನ ಮಾಡಿದ್ದಾರೆ.

ಇತ್ತ ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ರಕ್ಷಿತಾ ಗೆ ಸಾವಿರಾರು ವಿದ್ಯಾರ್ಥಿನಿಯರಿಂದ ಕಣ್ಣೀರಿನ ವಿದಾಯ ಹೇಳಿದರು.


ಸ್ನೇಹಿತೆಯನ್ನು ಕಳೆದುಕೊಂಡು ವಿದ್ಯಾರ್ಥಿನಿಯರು ಬಿಕ್ಕಳಿಸಿ ಬಿಕ್ಕಳಿಸಿ ಅತ್ತು ಬಿಟ್ಟರು. ರಕ್ಷಿತಾಳ ಪಾರ್ಥಿವ ಶರೀರ ಕಂಡು ವಿದ್ಯಾರ್ಥಿನಿಯರ ಜತೆ ಶಿಕ್ಷಕರು, ಸಾರ್ವಜನಿಕರು ಕಣ್ಣೀರು ಹಾಕಿದರು.ಚಿಕ್ಕಮಗಳೂರು ನಗರದಿಂದ ಸ್ವಗ್ರಾಮಕ್ಕೆ ರಕ್ಷಿತಾ ಮೃತದೇಹ ರವಾನೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು