7:56 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಹೆದ್ದಾರಿ ದುರಸ್ತಿ ಮಾಡಬೇಕಾದ ಸಂಸದೆ ಶೋಭಾ ಕರಂದ್ಲಾಜೆ ಅಡಗಿ ಕುಳಿತಿದ್ದಾರೆ: ಮಾಜಿ ಸಚಿವ ಸೊರಕೆ ಟೀಕೆ

22/09/2022, 21:57

ಉಡುಪಿ(reporterkarnataka.com):
ಜಿಲ್ಲೆಯಲ್ಲಿ ರಸ್ತೆಯ ದುರಾವಸ್ಥೆಯಿಂದ ಜನರು ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣ ಆಗಿದೆ. ಆದರೆ, ಹೆದ್ದಾರಿಯನ್ನು ದುರಸ್ತಿ ಮಾಡಬೇಕಾದ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಅಡಗಿ ಕುಳಿತಿದ್ದಾರೆ. ನಮ್ಮ ಸಂಸದೆಯನ್ನು ಹುಡುಕಿಕೊಡಿಯೆಂದು ಪೊಲೀಸ್ ಠಾಣೆಗೆ ದೂರು ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಟೀಕಿಸಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸುವಂತೆ ಆಗ್ರಹಿಸಿ ಹಾಗೂ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ ಇಂದು ಹಮ್ಮಿಕೊಳ್ಳಲಾದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. 

ನಮ್ಮ ಸಂಸದೆಗೆ ಸತ್ತವರ ಧರ್ಮ ನೋಡಿ ರಾಜಕೀಯ ಮಾಡುವುದು ಬಿಟ್ಟರೆ, ಜನರ ಸಮಸ್ಯೆ ಆಲಿಸುವ ಸೌಜನ್ಯ ಕೂಡ ಇಲ್ಲ‌. ನಾವು ಏನು ಅನ್ಯಾಯ ಮಾಡಿದ್ದೇವೆ. ನಾವೇನಾದರೂ ಪಾಕಿಸ್ತಾನದಲ್ಲಿ ಇದ್ದೇವಾ ಎಂದು ಪ್ರಶ್ನಿಸಿದರು.

40% ಕಮಿಷನ್, 70% ಬೆಲೆ ಏರಿಕೆ, ನಿರುದ್ಯೋಗ ಬಿಜೆಪಿ ಸರ್ಕಾರದ ಕೊಡುಗೆ. ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆಯನ್ನು ಕಿತ್ತು ಹಾಕುವ ಹುನ್ನಾರ ದೇಶಾದ್ಯಂತ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ಮುಖಂಡರಾದ ಚರಣ್ ವಿಠ್ಠಲ್ ಕುದಿ, ಇಸ್ಮಾಯಿಲ್ ಆತ್ರಾಡಿ, ಶಶಿಧರ್ ಜತನ್ನ, ಉಮೇಶ್ ಕಾಂಚನ್, ಲಕ್ಷ್ಮೀ ನಾರಾಯಣ ಪ್ರಭು, ಗುರುದಾಸ್ ಭಂಡಾರಿ, ದಿಲೀಪ್ ಹೆಗ್ಡೆ, ಕಿರಣ್ ಹೆಗ್ಡೆ, ಸಂತೋಷ್ ಶೆಟ್ಟಿ, ಸೌರಭ್ ಭಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು