2:31 PM Monday2 - February 2026
ಬ್ರೇಕಿಂಗ್ ನ್ಯೂಸ್
ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ…

ಇತ್ತೀಚಿನ ಸುದ್ದಿ

ಹೆದ್ದಾರಿ ದುರಸ್ತಿ ಮಾಡಬೇಕಾದ ಸಂಸದೆ ಶೋಭಾ ಕರಂದ್ಲಾಜೆ ಅಡಗಿ ಕುಳಿತಿದ್ದಾರೆ: ಮಾಜಿ ಸಚಿವ ಸೊರಕೆ ಟೀಕೆ

22/09/2022, 21:57

ಉಡುಪಿ(reporterkarnataka.com):
ಜಿಲ್ಲೆಯಲ್ಲಿ ರಸ್ತೆಯ ದುರಾವಸ್ಥೆಯಿಂದ ಜನರು ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣ ಆಗಿದೆ. ಆದರೆ, ಹೆದ್ದಾರಿಯನ್ನು ದುರಸ್ತಿ ಮಾಡಬೇಕಾದ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಅಡಗಿ ಕುಳಿತಿದ್ದಾರೆ. ನಮ್ಮ ಸಂಸದೆಯನ್ನು ಹುಡುಕಿಕೊಡಿಯೆಂದು ಪೊಲೀಸ್ ಠಾಣೆಗೆ ದೂರು ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಟೀಕಿಸಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸುವಂತೆ ಆಗ್ರಹಿಸಿ ಹಾಗೂ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ ಇಂದು ಹಮ್ಮಿಕೊಳ್ಳಲಾದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. 

ನಮ್ಮ ಸಂಸದೆಗೆ ಸತ್ತವರ ಧರ್ಮ ನೋಡಿ ರಾಜಕೀಯ ಮಾಡುವುದು ಬಿಟ್ಟರೆ, ಜನರ ಸಮಸ್ಯೆ ಆಲಿಸುವ ಸೌಜನ್ಯ ಕೂಡ ಇಲ್ಲ‌. ನಾವು ಏನು ಅನ್ಯಾಯ ಮಾಡಿದ್ದೇವೆ. ನಾವೇನಾದರೂ ಪಾಕಿಸ್ತಾನದಲ್ಲಿ ಇದ್ದೇವಾ ಎಂದು ಪ್ರಶ್ನಿಸಿದರು.

40% ಕಮಿಷನ್, 70% ಬೆಲೆ ಏರಿಕೆ, ನಿರುದ್ಯೋಗ ಬಿಜೆಪಿ ಸರ್ಕಾರದ ಕೊಡುಗೆ. ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆಯನ್ನು ಕಿತ್ತು ಹಾಕುವ ಹುನ್ನಾರ ದೇಶಾದ್ಯಂತ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ಮುಖಂಡರಾದ ಚರಣ್ ವಿಠ್ಠಲ್ ಕುದಿ, ಇಸ್ಮಾಯಿಲ್ ಆತ್ರಾಡಿ, ಶಶಿಧರ್ ಜತನ್ನ, ಉಮೇಶ್ ಕಾಂಚನ್, ಲಕ್ಷ್ಮೀ ನಾರಾಯಣ ಪ್ರಭು, ಗುರುದಾಸ್ ಭಂಡಾರಿ, ದಿಲೀಪ್ ಹೆಗ್ಡೆ, ಕಿರಣ್ ಹೆಗ್ಡೆ, ಸಂತೋಷ್ ಶೆಟ್ಟಿ, ಸೌರಭ್ ಭಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು