8:19 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ…

ಇತ್ತೀಚಿನ ಸುದ್ದಿ

ನಾನು ಆರೋಗ್ಯವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದೇನೆ: ಮಾಜಿ ಪ್ರಧಾನಿ ದೇವೇಗೌಡ

23/09/2022, 15:16

ಬೆಂಗಳೂರು(reporterkarnataka.com): ನಾನು ಆರೋಗ್ಯವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದೇನೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

ತಮ್ಮ ಆರೋಗ್ಯದ ಸ್ಥಿತಿ ಕುರಿತು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿರುವ ಅವರು, ‘ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದರು ಎಂದು ತಿಳಿಸಿದ್ದಾರೆ.

ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದರು. ಈ ಕಾರಣದಿಂದ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

‘ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಇನ್ನು ಕೆಲವು ದಿನಗಳ ನಂತರ ನಾನೇ ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುತ್ತೇನೆ. ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ’ ಎಂದು ತಿಳಿಸಿದ್ದಾರೆ.

ನನ್ನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕಂದಾಯ ಸಚಿವ ಆರ್‌. ಅಶೋಕ ಸೇರಿದಂತೆ ಎಲ್ಲ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ. ಹಾಗೆಯೇ, ನನ್ನ ಆರೋಗ್ಯಕ್ಕಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ’ ಎಂದು ದೇವೇಗೌಡ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು