9:20 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸರ್ವರ್ ಢಮಾರ್: ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಪಡಿತರಕ್ಕಾಗಿ ಕಾದು ಬಸವಳಿದ ವೃದ್ಧರು, ಮಹಿಳೆಯರು!!

23/09/2022, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಬಳಿಯ ಸುಂಕಸಾಲೆ ಸಮೀಪದ ಅಬ್ರುಗುಡಿಗೆಯ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಪರದಾಡುವಂತಾಗಿದೆ.

ಕಳೆದ ಕೆಲದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿಯಲ್ಲಿ ಸಂಜೆಯವರೆಗೂ ಕಾದು ಹಿಂದಿರುಗುವಂತಾಗಿದೆ.

ಈ ಭಾಗದಲ್ಲಿ ಬಹುತೇಕರೂ ಕೂಲಿ ಕಾರ್ಮಿಕರಾಗಿದ್ದು ಕೆಲಸಕ್ಕೆ ರಜೆ ಮಾಡಿ ನ್ಯಾಯಬೆಲೆ ಅಂಗಡಿಗೂ ಬಂದರೂ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಸಾಧ್ಯವಾಗದಂತಾಗಿದೆ. ಹಳ್ಳಿಗಾಡು ಪ್ರದೇಶದಿಂದ ಬರುವ ಮಹಿಳೆಯರು, ವೃದ್ದರು ದಿನಗಟ್ಟಲೆ ನ್ಯಾಯಬೆಲೆ ಅಂಗಡಿ ಬಾಗಿಲು ಕಾಯುವಂತಾಗಿದೆ.


ಅರಮನೆ ತಲಗೂರು ಗ್ರಾಮದ ವೃದ್ದೆ ಸುಂದರಮ್ಮ‌ ಸುಮಾರು 15 ಕಿ.ಮಿ‌ ದೂರದಿಂದ‌ ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬಂದಿದ್ದು ಬೆಳಿಗ್ಗೆ 9 ರಿಂದ ಸಂಜೆ 5-30 ರವರೆಗೂ ಕಾದರೂ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ಸಾಧವಾಗಲಿಲ್ಲ. ಕೆಲ ಮಹಿಳೆ ತಮ್ಮ ಮಕ್ಕಳೊಂದಿಗೆ ಬಂದು ಕಾದಿ ಬಸವಳಿದ ದೃಶ್ಯ ಮನಕಲಕುವಂತಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು