11:56 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ವಿಧಾನ ಸಭೆಯಲ್ಲಿ ಕನ್ನಡ ವಿಧೇಯಕ ಮಂಡನೆ: ಉನ್ನತ ಶಿಕ್ಷಣದಲ್ಲಿ ಮೀಸಲಾತಿ, ಸ್ಥಳೀಯರಿಗೆ ಉದ್ಯೋಗ

23/09/2022, 22:11

ಬೆಂಗಳೂರು(reporterkarnataka.com): ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಶಾಸನಾತ್ಮಕ  ಬಲವನ್ನು ಒಳಗೊಂಡಂಥ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಕನ್ನಡ  ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್ ವಿಧೇಯಕವನ್ನು ಮಂಡಿಸಿದ್ದು, ಆಡಳಿತ ಕನ್ನಡ ಜಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವುದು ಸೇರಿದಂತೆ ಶಿಸ್ತು ಕ್ರಮಗಳ ಅನುಷ್ಠಾನಕ್ಕಾಗಿ ವಿವಿಧ ಹಂತಗಳಲ್ಲಿ ಜಾರಿ ಪ್ರಾಧಿಕಾರ ರಚನೆ ಮಾಡುವುದಕ್ಕೆ ಈ ವಿಧೇಯಕದ ಮೂಲಕ ಅವಕಾಶ ನೀಡಲಾಗಿದೆ ಎಂದರು.

ಮುಖ್ಯವಾಗಿ ರಾಜ್ಯದಲ್ಲಿ ಭೂಮಿ, ತೆರಿಗೆ ರಿಯಾಯಿತಿ, ಅನುದಾನ ಹಾಗೂ ಇತರೆ ಸೌಲಭ್ಯ ಪಡೆಯುತ್ತಿರುವ ಕೈಗಾರಿಕೆಗಳು, ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ಕಾಯಿದೆಯ ಮೇಲ್ವಿಚಾರಣೆಗೂ ಈ ವಿಧೇಯಕ ಬಲ ನೀಡಲಿದೆ.

*ಕಾಯಿದೆಯ ಮುಖ್ಯಾಂಶಗಳು

೧ ಉನ್ನತ, ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಪರಿಚಯಿಸಿ ಕನ್ನಡ ಕಲಿಕೆಗೆ ಪ್ರೋತ್ಸಾಹಿಸುವುದು.

೨ . ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಉನ್ನತ , ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಮೀಸಲು ಸೌಲಭ್ಯ.

೩. ರಾಜ್ಯ ಸರ್ಕಾರ, ಸ್ಥಳೀಯ ಪ್ರಾಧಿಕಾರ, ಶಾಸನಬದ್ಧ ಸಂಸ್ಥೆಗಳು, ಸಹಕಾರ ಸಂಘಗಳ ನೇಮಕ ಪ್ರಕ್ರಿಯೆಯಲ್ಲಿ ಕನ್ನಡ ಭಾಷಾ ಜ್ಞಾನ ಕಡ್ಡಾಯ.

೪. ಅಧೀನ ನ್ಯಾಯಾಲಯ ಹಾಗೂ ನ್ಯಾಯ ಮಂಡಳಿಗಳಲ್ಲಿ ಕನ್ನಡ ಭಾಷಾ ಬಳಕೆ.

೫. ಕನ್ನಡದ ಬಳಕೆ ಮತ್ತು ಪ್ರಸಾರಕ್ಕೆ ನೀತಿ.

೬. ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶದಲ್ಲಿ ಕನ್ನಡ ಬಳಕೆಗೆ ಕ್ರಮ.

೭ . ರಾಜ್ಯ ಸರಕಾರದಿಂದ ತೆರಿಗೆ ರಿಯಾಯಿತಿ ಹಾಗೂ ಇತರೆ ಸೌಲಭ್ಯ ಪಡೆದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವುದು.

೮. ಉದ್ಯೋಗ ಪೋರ್ಟಲ್ ಸ್ಥಾಪನೆ.

೯ . ಅನುಷ್ಠಾನಗಳ ಮೇಲ್ವಿಚಾರಣೆಗೆ ಕಾರ್ಯ ವ್ಯವಸ್ಥೆ ಸ್ಥಾಪನೆ.

ದಂಡ ವ್ಯವಸ್ಥೆ: ಇದೆಲ್ಲಕ್ಕಿಂತ ಮುಖ್ಯವಾಗಿ ಕನ್ನಡ ಅನುಷ್ಠಾನ ಉಲ್ಲಂಘನೆ ಮಾಡಿದ ವ್ಯಕ್ತಿ, ಸಂಘ- ಸಂಸ್ಥೆಗಳಿಗೆ ಈ ಕಾಯಿದೆಯ ಮೂಲಕ ದಂಡ ವಿಧಿಸುವ ಉಪಬಂಧವನ್ನು ಈ ಕಾಯಿದೆಯ ಮೂಲಕ ಪರಿಚಯಿಸಲಾಗುತ್ತಿದೆ. ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ ಖಾಸಗಿ ವ್ಯಕ್ತಿ, ಕಾರ್ಖಾನೆ, ಸಂಘಟನೆಗಳಿಗೆ  ೫೦೦೦ ರೂ, ಎರಡನೇ ಬಾರಿಗೆ 10,000 ರೂ. ಹಾಗೂ ಮೂರನೇ ಬಾರಿಗೆ ತಪ್ಪೆಸಗಿದವರಿಗೆ ೨೦, ೦೦೦ ರೂ.ವರೆಗೆ ದಂಡ ವಿಧಿಸುವ ಅಧಿಕಾರವನ್ನು ವಿವಿಧ ಹಂತದಲ್ಲಿ ಜಾರಿಗೆ ತರುವ ಅಧಿಕಾರ ಜಾರಿ ಪ್ರಾಧಿಕಾರಕ್ಕೆ ನೀಡಲಾಗುತ್ತದೆ. ಸರಕಾರಿ ಅಧಿಕಾರಿಗಳು ಕನ್ನಡ ಜಾರಿ ವಿಚಾರದಲ್ಲಿ ಎಸಗುವ ತಪ್ಪನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ.

ಪ್ರೋತ್ಸಾಹ: ಇ ಆಡಳಿತ ಇಲಾಖೆಯಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಭಾಷೆಯ ಪರಿಣಾಮಕಾರಿ ಅಭಿವೃದ್ಧಿಗಾಗಿ ಸರಕಾರಕ್ಕೆ ಸೃಜನಾತ್ಮಕ ಸಲಹೆ ನೀಡುವ ವ್ಯಕ್ತಿಗಳಿಗೆ ಪ್ರೋತ್ಸಾಹ ನೀಡುವುದಕ್ಕೂ ಈ ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು