3:10 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಉತ್ತರಾಖಂಡದಲ್ಲಿ ಯುವತಿಯ ಹತ್ಯೆ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್ ಧ್ವಂಸಕ್ಕೆ ಸಿಎಂ ಆದೇಶ

24/09/2022, 17:12

ಹರಿದ್ವಾರ(reporterkarnataka.com): ಉತ್ತರಾಖಂಡ ಮುಖ್ಯಮಂತ್ರಿಯ ಆದೇಶದಂತೆ

19ರ ಹರೆಯದ ರಿಸೆಪ್ಷನಿಸ್ಟ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಒಡೆತನದ ಋಷಿಕೇಶದಲ್ಲಿರುವ ವನತಾರಾ ರೆಸಾರ್ಟ್ ಅನ್ನು ಧ್ವಂಸಗೊಳಿಸಲಾಗಿದೆ.

ರೆಸಾರ್ಟ್‌ನಲ್ಲಿ ರಿಸೆಪ್ಷನಿಸ್ಟ್ ಆಗಿದ್ದ 19 ವರ್ಷದ ಯುವತಿ ಹತ್ಯೆ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ವಿನೋದ್ ಆರ್ಯ ಪುತ್ರ ಪುಲ್ಕಿತ್ ಆರ್ಯ ಎಂಬಾತನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಯುವತಿಯ ಹತ್ಯೆ ವಿರುದ್ಧ ಪ್ರತಿಭಟನೆ ತೀವ್ರಗೊಂಡಿತು ಹಿನ್ನೆಲೆಯಲ್ಲಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್  ಸಿಂಗ್ ಧಾಮಿ ರೆಸಾರ್ಟ್ ಧ್ವಂಸಕ್ಕೆ ಆದೇಶ ನೀಡಿದ್ದರು. ಮುಖ್ಯಮಂತ್ರಿ 

ಆದೇಶದ ಮೇರೆ ರೆಸಾರ್ಟ್ ಅನ್ನು ನೆಲಸಮಗೊಳಿಸುವ ಕಾರ್ಯ ನಡೆಯುತ್ತಿದೆ” ಎಂದು ಮುಖ್ಯಮಂತ್ರಿಯ ವಿಶೇಷ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.

ಇಲ್ಲಿನ ಯಮಕೇಶ್ವರ ಬ್ಲಾಕ್‌ನಲ್ಲಿರುವ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಎಂಬ ಮೂವರು ಆರೋಪಿಗಳನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಹದಿಹರೆಯದವರ ಹತ್ಯೆಯ ಆರೋಪದ ನಂತರ ರಾಜ್ಯದ ಎಲ್ಲಾ ರೆಸಾರ್ಟ್‌ಗಳಲ್ಲಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಆದೇಶ ನೀಡಿದ್ದಾರೆ. ಅಕ್ರಮವಾಗಿ ನಡೆಸುತ್ತಿರುವ ರೆಸಾರ್ಟ್‌ಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ.

ಕಠಿಣ ಶಿಕ್ಷೆ: ಅಕ್ರಮವಾಗಿ ನಡೆಸುತ್ತಿರುವ ರೆಸಾರ್ಟ್‌ಗಳ ವಿರುದ್ಧ ಹಾಗೂ ಅತ್ಯಾಚಾರಿ ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಧಾಮಿ ಭರವಸೆ ನಿಡಿದ್ದಾರೆ. “ಇದು ದುರದೃಷ್ಟಕರ. ಪೊಲೀಸರು ಕೆಲಸ ಮಾಡುತ್ತಿದ್ದಾರೆ, ಆರೋಪಿಗಳನ್ನು ಬಂಧಿಸಿದ್ದಾರೆ. ಅಂತಹ ಘೋರ ಅಪರಾಧ ಸಾಬೀತಾದರೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ. ಅಪರಾಧಿ ಯಾರೇ ಆಗಿರಲಿ ಅವರಿಗೆ ಶಿಕ್ಷೆ ಖಂಡಿತ “ಎಂದು ಅವರು ಭರವಸೆ ನೀಡಿದ್ದಾರೆ.

”ಬಾಲಕಿಯ ಹತ್ಯೆಯ ನಂತರ, ಅಪರಾಧಿಗಳಲ್ಲಿ ಭಯ ಹುಟ್ಟಿಸಲು ಕಟ್ಟಡವನ್ನು ನೆಲಸಮಗೊಳಿಸಬೇಕು ಎಂದು ನಾನು ತಕ್ಷಣವೇ ಹೇಳಿದ್ದೇನೆ” ಎಂದು ಯಮಕೇಶ್ವರ ಶಾಸಕ ರೇಣು ಬಿಷ್ತ್ ಹೇಳಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ಆದೇಶಿಸಿದ ಸಿಎಂಗೆ ಹಾಗೂ ಸಂತ್ರಸ್ತೆಯ ಪೋಷಕರೊಂದಿಗೆ ಅನುಚಿತವಾಗಿ ವರ್ತಿಸಿದ ಕಂದಾಯ ಪೊಲೀಸ್ ಉಪನಿರೀಕ್ಷಕರನ್ನು ಅಮಾನತುಗೊಳಿಸಿದ್ದಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.

ಪುಲ್ಕಿತ್ ಆರ್ಯ ಹರಿದ್ವಾರದ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ. ವಿನೋದ್ ಆರ್ಯ ಅವರು ಈ ಹಿಂದೆ ಉತ್ತರಾಖಂಡದ ಮತಿ ಕಲಾ ಮಂಡಳಿಯ ಅಧ್ಯಕ್ಷರಾಗಿ ರಾಜ್ಯ ಸಚಿವ ಶ್ರೇಣಿಯನ್ನು ಹೊಂದಿದ್ದರು. ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯನ್ನು ಹತ್ಯೆಗೈದ ಆರೋಪದ ಮೇಲೆ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಸೇರಿದಂತೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ. ಸೆಪ್ಟೆಂಬರ್ 18 ರಂದು ಬಾಲಕಿ ಕಾಣೆಯಾಗಿದ್ದಳು. ಆರೋಪಿಗಳು ಬಾಲಕಿಗೆ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ತಂದೆ ಆರೋಪಿಸಿದ್ದು, ಘಟನೆಯ ಆಡಿಯೋವನ್ನು ರೆಕಾರ್ಡ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು