7:47 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಭಕ್ತನೊಬ್ಬನಿಂದ ದೇವರಿಗೆ ಪತ್ರ!: ಕಳಸ ತಾಲೂಕಿನ ಕಳಸೇಶ್ವರ ದೇಗುಲದ ಹುಂಡಿಯಲ್ಲಿ ಪತ್ತೆ!

24/09/2022, 19:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವರಿಗೆ ಭಕ್ತನೊಬ್ಬ ವಿಚಿತ್ರ ಪತ್ರವೊಂದು ಬರೆದಿರುವುದು ಬೆಳಕಿಗೆ ಬಂದಿದೆ. 

ಕಳಸೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ ಪತ್ರ ಪತ್ತೆಯಾಗಿದೆ. 

ತಾಯಿ ನಮ್ಮವ್ವ, ರಮೇಶ್-ಮಂಜುಳ ಸಂಬಳವನ್ನ ರಾಜಮ್ಮನ ಕೈಗೆ ಕೊಡಲಿ. ನನ್ನ ಮದುವೆ ಯಾವುದೇ ವಿಘ್ನವಿಲ್ಲದೆ ನೆರವೇರುವಂತೆ ಮಾಡು. ಐಶ್ವರ್ಯ ಬೇಗ ದಪ್ಪ ಆಗಿ, ದೃಷ್ಠಿಯಾಗಿ ಕಾಣುವಂತೆ ಮಾಡು ಎಂದು ಮಾರಮ್ಮನಿಗೆ ಭಕ್ತ ಪತ್ರ ಬರೆದಿದ್ದಾನೆ.


ಮಂಜುಳಾ ಅತ್ತೆ-ಮಾವನ ಜೊತೆ ಪ್ರೀತಿಯಿಂದ ಇರುವಂತೆ ಮಾಡು. ಮಂಜುಳ ಮನಸ್ಸಿನಲ್ಲಿ ರಾಜಮ್ಮ, ಬಸವರಾಜುನನ್ನ ಒಳ್ಳೆಯವರಾಗಿಸು 
ದೇವರಾಜುಗೆ ಕೈತುಂಬಾ ಸಂಬಳ ಸಿಗುವ ಸರ್ಕಾರಿ ಕೆಲಸ ಕೊಡಿಸು.ದೇವರಿಗೆ ವಿಚಿತ್ರವಾಗಿ ಪತ್ರ ಬರೆದು ಭಕ್ತ ಬೇಡಿಕೊಂಡಿದ್ದಾನೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಸೇಶ್ವರ ದೇವಾಲಯ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು