11:44 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಆಮ್ ಆದ್ಮಿ ಪಾರ್ಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

24/09/2022, 23:53

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜನರು ಆರೋಗ್ಯ ತಪಾಸಣೆಗೆ ಒಳಗಾಗುವುದರ ಮೂಲಕ ಸಂಭವನೀಯ ಅನಾರೋಗ್ಯದಿಂದ ಮುಕ್ತರಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಎಎಪಿ ಮುಖಂಡ ಡಾ . ವೈ.ವಿ.ವೆಂಕಟಾಚಲ ಹೇಳಿದರು. 

ಪಟ್ಟಣದ ಸಂತೆ ಮೈದಾನದಲ್ಲಿ ಶನಿವಾರ ತಾಲ್ಲೂಕು ಎಎಪಿ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು , ಆರ್ಥಿಕ ಸಮಸ್ಯೆ ಹಾಗೂ ನಿರ್ಲಕ್ಷ್ಯದ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಹದಗೆಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ಗ್ರಾಮೀಣರು ಕೃಷಿ ಚಟುವಟಿಕೆ ಒತ್ತಡದಲ್ಲಿ ವೈಯಕ್ತಿಕ ಆರೋಗ್ಯದ ಕಡೆ ಅಗತ್ಯ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಕೆಲವರು ವಾರದ ಸಂತೆಗೆ ಕಡ್ಡಾಯವಾಗಿ ಖರೀದಿಗೆ ಬರುತ್ತಾರೆ. ಅವರ ಹಿತದೃಷ್ಟಿಯಿಂದ ತಾಲ್ಲೂಕಿನ ಪ್ರತಿ ಸಂತೆಯಲ್ಲೂ ಎಎಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ.

ಪ್ರತಿ ಸಂತೆಯಲ್ಲೂ ನೂರಾರು ಜನರು ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಶಿಬಿರದಲ್ಲಿ ಆರೋಗ್ಯ ಸಿಬ್ಬಂದಿ ವಿವಿಧ ಪರೀಕ್ಷೆಗಳನ್ನು ನಡೆಸಿ , ಆಯಾ ವ್ಯಕ್ತಿಯ ಆರೋಗ್ಯದ ಬಗ್ಗೆ ತಿಳಿಸುತ್ತಾರೆ.

ತಜ್ಞ ವೈದ್ಯರು ಪರೀಕ್ಷಿಸಿ ಆರೋಗ್ಯ ಸಲಹೆ ನೀಡುತ್ತಾರೆ, ಅದರಂತೆ ನಡೆದುಕೊಂಡರೆ ಅವರ ಆರೋಗ್ಯ ಸುಧಾರಿಸುತ್ತದೆ. ಇದು ಎಎಪಿ ಉಚಿತ ಸೇವೆಯಾಗಿರುತ್ತದೆ ಎಂದು ಹೇಳಿದರು. 

ಶಿಬಿರದಲ್ಲಿ ವೆಂಕಟೇಶ್ವರ ನರ್ಸಿಂಗ್ ಹೋಂ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರು ೩೦೦ ಕ್ಕೂ ಹೆಚ್ಚು ವ್ಯಕ್ತಿಗಳ ಆರೋಗ್ಯ ತಪಾಸಣೆ ನಡೆಸಿ , ಅಗತ್ಯ ವೈದ್ಯಕೀಯ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು