1:36 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

25/09/2022, 14:42

ಲಾರ್ಡ್ಸ್(reporterkarnataka.com): ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿರುವ ಭಾರತದ ಖ್ಯಾತ ಬೌಲರ್ ಜೂಲನ್ ಗೋಸ್ವಾಮಿಯವರ ವಿದಾಯ ಸರಣಿಯನ್ನು ಭಾರತ ಮಹಿಳಾ ಕ್ರಿಕೆಟ್ ತಂಡ ಸ್ಮರಣೀಯವಾಗಿಸಿದೆ.‌

ಅತಿಥೇಯ ಇಂಗ್ಲೆಂಡ್ ವಿರುದ್ಧ ಶನಿವಾರ ಲಾರ್ಡ್ಸ್ ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 16 ರನ್‍ಗಳ ಜಯ ಸಾಧಿಸುವ ಮೂಲಕ ಭಾರತ ವನಿತೆಯರು ಸರಣಿಯಲ್ಲಿ ಕ್ಲೀನ್‍ಸ್ವೀಪ್ ಸಾಧಿಸಿದರು.

170 ರನ್‍ಗಳ ಗೆಲುವಿನ ಗುರಿ ಹೊಂದಿದ್ದ ಇಂಗ್ಲೆಂಡ್ ಒಂದು ಹಂತದಲ್ಲಿ 103 ರನ್‍ಗಳಿಗೆ ಎಂಟು ವಿಕೆಟ್ ಕಳೆದುಕೊಂಡು ದಯನೀಯ ಸ್ಥಿತಿಯಲ್ಲಿತ್ತು. ಆದಾಗ್ಯೂ ನಾಯಕಿ ಅಮೆ ಜೋನ್ಸ್ ಹಾಗೂ ಚಾರ್ಲಿ ಡೀನ್, ಭಾರತದ ಬೌಲರ್‍ಗಳನ್ನು ಬಹಳ ಹೊತ್ತು ಕಾಡಿದರು. ಕೊನೆಗೆ ಜೋನ್ಸ್ (28) ಅವರ ವಿಕೆಟ್ ಕಬಳಿಸಿ ಭಾರತ ಪಾಳಯದಲ್ಲಿ ಸಂತಸಕ್ಕೆ ಕಾರಣರಾದರು. ಡೀನ್ ಈ ಹಂತದಲ್ಲೂ ಭಾರತದ ಕೈಯಿಂದ ಗೆಲುವು ಕಸಿಯುವ ಏಕಾಂಗಿ ಪ್ರಯತ್ನ ನಡೆಸಿದರು. ಆದರೆ 47 ರನ್ ಗಳಿಸಿದ ಡೀನ್, ದೀಪ್ತಿ ಶರ್ಮಾ ಅವರಿಗೆ ಬಲಿಯಾದರು. ಇದರೊಂದಿಗೆ 153 ರನ್‍ಗಳಿಗೆ ಆಲೌಟ್ ಆದ ಇಂಗ್ಲೆಂಡ್ ತಂಡ 16 ರನ್ ಅಂತರದಲ್ಲಿ ಕೊನೆಯ ಪಂದ್ಯವನ್ನೂ ಸೋತಿತು.

ಇಂಗ್ಲೆಂಡ್ ತಂಡ ಟಾಸ್ ಗೆದ್ದು ಎದುರಾಳಿಗಳನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿತು. ಸ್ಮೃತಿ ಮಂದಾನ (50) ಮತ್ತು ದೀಪ್ತಿ (ನಾಟೌಟ್ 68)ಯವರ ಅರ್ಧ ಶತಕಗಳ ಹೊರತಾಗಿಯೂ, ಇಂಗ್ಲೆಂಡ್ ತಂಡ ಭಾರತವನ್ನು 169 ರನ್‍ಗಳಿಗೆ ಕಟ್ಟಿ ಹಾಕಿತ್ತು. ಅಂತಿಮ ಅಂತರರಾಷ್ಟ್ರೀಯ ಪಂದ್ಯ ಆಡಿದ ಗೋಸ್ವಾಮಿ ಮೊದಲ ಬಾಲ್‍ನಲ್ಲೇ ಔಟ್ ಆಗಿ ನಿರಾಸೆ ಹೊಂದಿದರು.

ಇಂಗ್ಲೆಂಡ್ ಪರ ಕೇಟ್ ಕ್ರಾಸ್ 26 ರನ್‍ಗಳಿಗೆ ನಾಲ್ಕು ವಿಕೆಟ್ ಕಬಳಿಸಿದರೆ, ಭಾರತದ ಪರ ರೇಣುಕಾ (29ಕ್ಕೆ 4) ಯಶಸ್ವಿ ಬೌಲರ್ ಎನಿಸಿದರು. ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್‍ಗಳ ಜಯ ಸಾಧಿಸಿದ್ದರೆ, ಎರಡನೇ ಪಂದ್ಯವನ್ನು 88 ರನ್ ಅಂತರದಿಂದ ಗೆದ್ದುಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು