8:56 PM Sunday20 - July 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ…

ಇತ್ತೀಚಿನ ಸುದ್ದಿ

17.25 ಲಕ್ಷ ವೆಚ್ಚದಲ್ಲಿ ಗೋವಿಂದದಾಸ ಕಾಲೇಜು ಮುಂಭಾಗ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

25/09/2022, 14:49

ಮಂಗಳೂರು(reporterkarnataka.com):17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆ ನೆರವೇರಿಸಿದರು.

ಈ ಬಸ್ ನಿಲ್ದಾಣದಲ್ಲಿ ವೈಫೈ ಚಾರ್ಜಿಂಗ್ ಪಾಯಿಂಟ್, ತಾತ್ಕಾಲಿಕ ವಿಶ್ರಾಂತಿಗೆ ಆಸನ, ಮಹಿಳೆಯರ, ಮಕ್ಕಳ ಸುರಕ್ಷತೆಗೆ ಅಲರ್ಟ್ ಅಲರಾಂ ಮತ್ತಿತರ ವ್ಯವಸ್ಥೆಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಯೋ ಶೌಚಾಲಯ ವ್ಯವಸ್ಥೆ ನಿರ್ಮಾಣ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ಸ್ಥಳೀಯ ಮನಪಾ ಸದಸ್ಯರಾದ ವರುಣ್ ಚೌಟ, ಸ್ಥಾಯೀ ಸಮಿತಿ ಅಧ್ಯಕ್ಷೆ ನಯನ, ಕಾರ್ಪೋರೇಟರ್ ಗಳಾದ ಸರಿತಾ ಶಶಿಧರ್, ಲೋಕೇಶ್ ಬೊಳ್ಳಾಜೆ, ಬಿಜೆಪಿ ಪ್ರಮುಖರಾದ ಗಣೇಶ್ ಹೊಸಬೆಟ್ಟು, ವಿಠಲ ಸಾಲ್ಯಾನ್,  ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ಪೃಥ್ವಿರಾಜ್ ಶೆಟ್ಟಿ ಕಡಂಬೋಡಿ ಕೆ, ರಾಘವೇಂದ್ರ ರಾವ್, ಕೆ ಪಿ ಚಂದ್ರಶೇಖರ್, ಸುನಿಲ್ ಕುಳಾಯಿ ,ರಾಘವೇಂದ್ರ ಶೆಣೈ, ಉಮೇಶ್ ದೇವಾಡಿಗ ಇಡ್ಯಾ, ಓಂಪ್ರಕಾಶ್ ಶೆಟ್ಟಿಗಾರ್, ಪವಿತ್ರ ನಿರಂಜನ್, ರಮೇಶ್ ಅಳಪೆ, ಪ್ರಜ್ವಲ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಲೋಕನಾಥ್, ತಿರುಮಲೇಶ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಮೂಡಾದ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು