3:25 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಹಾನಗಲ್ ಬೈ ಎಲೆಕ್ಷನ್: ದಿನಾಂಕ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಫೈಟ್ 

28/06/2021, 08:13

ಕೃಷ್ಣಪ್ರಿಯಾ ಎಸ್. ಹಾವೇರಿ

info.reporterkarnataka.com

ಒಂದು ಕಡೆ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಬೀದಿ ರಂಪ ಶುರುವಾದರೆ ಇನ್ನೊಂದು ಕಡೆ ಹಾನಗಲ್ ಕ್ಷೇತ್ರದಿಂದ ಉಪ ಚುನಾವಣೆ ಸ್ಪರ್ಧಿಸಲು ಫೈಟ್ ಶುರುವಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮಾಜಿ ಸಚಿವ ಸಿ.ಎಂ. ಉದಾಸೀನ ಅವರ ನಿಧನದಿಂದ ಕ್ಷೇತ್ರ ತೆರವಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಮನೋಹರ್ ತಹಶೀಲ್ದಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು. ಶ್ರೀನಿವಾಸ ಮಾನೆ ಸ್ಪರ್ಧಿಸಿದ್ದರು. ಆದರೆ ಇಲ್ಲಿ ಬಿಜೆಪಿಯ ಸಿ.ಎಂ. ಉದಾಸಿ ಜಯಗಳಿಸಿದ್ದರು. ಹಾಗಾಗಿ ಈ ಬಾರಿ ಇದೇ ಇಬ್ಬರು ನಾಯಕರ ನಡುವೆ ಮತ್ತೆ ಸ್ಪರ್ಧೆ ಏರ್ಪಟ್ಟಿದೆ.

ಬೈಎಲೆಕ್ಷನ್ ದಿನಾಂಕ ಘೋಷಣೆಗೂ ಮುನ್ನವೇ ಟಿಕೆಟ್ ಸಮರ ತಾರಕಕ್ಕೇರಿದೆ. ಮಾಜಿ ಸಚಿವ ಮನೋಹರ ತಹಶೀಲ್ದಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಒಂದು ಸುತ್ತಿನ ಸಭೆ ಕೂಡ ನಡೆಸಿದ್ದಾರೆ. ಸಭೆಯಲ್ಲಿ ಹಾನಗಲ್‌ನವರಿಗೆ ಮಾತ್ರ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಇದು ಪರೋಕ್ಷವಾಗಿ

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಅವರಿಗೆ ಟಿಕೆಟ್‌ ನೀಡದಂತೆ ಎಚ್ಚರಿಕೆಯಾಗಿದೆ.

ಹೊರಗಿನವರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಶ್ರಿನಿವಾಸ ಮಾನೆ, ಸೋತರೂ ಕ್ಷೇತ್ರ ಬಿಟ್ಟು ಹೋಗದೆ ಕೆಲಸ ಮಾಡುತ್ತಿದ್ದರು. ಕ್ಷೇತ್ರದಲ್ಲಿಯೇ ಮನೆ ಮಾಡಿಕೊಂಡು ಕೆಲಸ ಮಾಡುತ್ತಿದ್ದರು. ಹೀಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು