3:15 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಹಾನಗಲ್ ಬೈ ಎಲೆಕ್ಷನ್: ದಿನಾಂಕ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಫೈಟ್ 

28/06/2021, 08:13

ಕೃಷ್ಣಪ್ರಿಯಾ ಎಸ್. ಹಾವೇರಿ

info.reporterkarnataka.com

ಒಂದು ಕಡೆ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಬೀದಿ ರಂಪ ಶುರುವಾದರೆ ಇನ್ನೊಂದು ಕಡೆ ಹಾನಗಲ್ ಕ್ಷೇತ್ರದಿಂದ ಉಪ ಚುನಾವಣೆ ಸ್ಪರ್ಧಿಸಲು ಫೈಟ್ ಶುರುವಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮಾಜಿ ಸಚಿವ ಸಿ.ಎಂ. ಉದಾಸೀನ ಅವರ ನಿಧನದಿಂದ ಕ್ಷೇತ್ರ ತೆರವಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಮನೋಹರ್ ತಹಶೀಲ್ದಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು. ಶ್ರೀನಿವಾಸ ಮಾನೆ ಸ್ಪರ್ಧಿಸಿದ್ದರು. ಆದರೆ ಇಲ್ಲಿ ಬಿಜೆಪಿಯ ಸಿ.ಎಂ. ಉದಾಸಿ ಜಯಗಳಿಸಿದ್ದರು. ಹಾಗಾಗಿ ಈ ಬಾರಿ ಇದೇ ಇಬ್ಬರು ನಾಯಕರ ನಡುವೆ ಮತ್ತೆ ಸ್ಪರ್ಧೆ ಏರ್ಪಟ್ಟಿದೆ.

ಬೈಎಲೆಕ್ಷನ್ ದಿನಾಂಕ ಘೋಷಣೆಗೂ ಮುನ್ನವೇ ಟಿಕೆಟ್ ಸಮರ ತಾರಕಕ್ಕೇರಿದೆ. ಮಾಜಿ ಸಚಿವ ಮನೋಹರ ತಹಶೀಲ್ದಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಒಂದು ಸುತ್ತಿನ ಸಭೆ ಕೂಡ ನಡೆಸಿದ್ದಾರೆ. ಸಭೆಯಲ್ಲಿ ಹಾನಗಲ್‌ನವರಿಗೆ ಮಾತ್ರ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಇದು ಪರೋಕ್ಷವಾಗಿ

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಅವರಿಗೆ ಟಿಕೆಟ್‌ ನೀಡದಂತೆ ಎಚ್ಚರಿಕೆಯಾಗಿದೆ.

ಹೊರಗಿನವರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಶ್ರಿನಿವಾಸ ಮಾನೆ, ಸೋತರೂ ಕ್ಷೇತ್ರ ಬಿಟ್ಟು ಹೋಗದೆ ಕೆಲಸ ಮಾಡುತ್ತಿದ್ದರು. ಕ್ಷೇತ್ರದಲ್ಲಿಯೇ ಮನೆ ಮಾಡಿಕೊಂಡು ಕೆಲಸ ಮಾಡುತ್ತಿದ್ದರು. ಹೀಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು