11:19 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

25/09/2022, 18:02

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.

ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಫರಂಗಿಪೇಟೆ ಸಮೀಪದ 10ನೇ ಮೈಲುಗಲ್ಲು ಬಳಿ ಚಿರತೆಯೊಂದನ್ನು ನೋಡಿದ್ದಾಗಿ ತಿಳಿಸಿದ್ದಾರೆ.

ಹತ್ತನೇ ಮೈಲುಗಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಚಿರತೆಯನ್ನು ನೋಡಿದ್ದು ಕೂಡಲೇ ಅದು ಹೆದ್ದಾರಿ ಪಕ್ಕದ ಖಾಲಿ ಜಾಗದಲ್ಲಿ ಓಡಿದೆ ಎಂದು ತಿಳಿಸಿದ್ದಾರೆ.

ಚಿರತೆಯ ಬಗ್ಗೆ ಅವರು ಪಕ್ಕದ ಹೊಟೇಲ್ ಒಂದರಲ್ಲಿದ್ದ ಸ್ಥಳೀಯರಲ್ಲಿ ಮಾಹಿತಿ ನೀಡಿದ್ದು ಬಳಿಕ ಈ ಸುದ್ದಿ ಪರಿಸರದಲ್ಲಿ ಹರಿದಾಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಫರಂಗಿಪೇಟೆ ಸಮೀಪದ ವಳಚ್ಚಿಲ್ ಪದವು ಎಂಬಲ್ಲಿನ ಜನರು ಶನಿವಾರ ಬೆಳಗ್ಗೆ ಪರಿಸರದಲ್ಲಿ ಚಿರತೆಯೊಂದನ್ನು ನೋಡಿದ್ದ ಬಗ್ಗೆ ಸುದ್ದಿ ತಿಳಿದು ಬಂದಿದೆ. ಅದೇ ಚಿರತೆ ರಾತ್ರಿ ಹತ್ತನೇ ಮೈಲುಗಲ್ಲಿನಲ್ಲಿ ಕಂಡುಬಂದಿರಬಹುದು ಎಂದು ಸ್ಥಳೀಯ ಜನರು ತಿಳಿಸಿದ್ದಾರೆ‌.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಪುದು ಗ್ರಾಮ ಪಂಚಾಯತ್‌ ಅಧ್ಯಕ್ಷ ರಮ್ಲಾನ್‌ ಮಾರಿಪಳ್ಳ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು