11:41 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

25/09/2022, 18:02

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.

ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಫರಂಗಿಪೇಟೆ ಸಮೀಪದ 10ನೇ ಮೈಲುಗಲ್ಲು ಬಳಿ ಚಿರತೆಯೊಂದನ್ನು ನೋಡಿದ್ದಾಗಿ ತಿಳಿಸಿದ್ದಾರೆ.

ಹತ್ತನೇ ಮೈಲುಗಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಚಿರತೆಯನ್ನು ನೋಡಿದ್ದು ಕೂಡಲೇ ಅದು ಹೆದ್ದಾರಿ ಪಕ್ಕದ ಖಾಲಿ ಜಾಗದಲ್ಲಿ ಓಡಿದೆ ಎಂದು ತಿಳಿಸಿದ್ದಾರೆ.

ಚಿರತೆಯ ಬಗ್ಗೆ ಅವರು ಪಕ್ಕದ ಹೊಟೇಲ್ ಒಂದರಲ್ಲಿದ್ದ ಸ್ಥಳೀಯರಲ್ಲಿ ಮಾಹಿತಿ ನೀಡಿದ್ದು ಬಳಿಕ ಈ ಸುದ್ದಿ ಪರಿಸರದಲ್ಲಿ ಹರಿದಾಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಫರಂಗಿಪೇಟೆ ಸಮೀಪದ ವಳಚ್ಚಿಲ್ ಪದವು ಎಂಬಲ್ಲಿನ ಜನರು ಶನಿವಾರ ಬೆಳಗ್ಗೆ ಪರಿಸರದಲ್ಲಿ ಚಿರತೆಯೊಂದನ್ನು ನೋಡಿದ್ದ ಬಗ್ಗೆ ಸುದ್ದಿ ತಿಳಿದು ಬಂದಿದೆ. ಅದೇ ಚಿರತೆ ರಾತ್ರಿ ಹತ್ತನೇ ಮೈಲುಗಲ್ಲಿನಲ್ಲಿ ಕಂಡುಬಂದಿರಬಹುದು ಎಂದು ಸ್ಥಳೀಯ ಜನರು ತಿಳಿಸಿದ್ದಾರೆ‌.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಪುದು ಗ್ರಾಮ ಪಂಚಾಯತ್‌ ಅಧ್ಯಕ್ಷ ರಮ್ಲಾನ್‌ ಮಾರಿಪಳ್ಳ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು