9:26 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

25/09/2022, 18:02

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.

ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಫರಂಗಿಪೇಟೆ ಸಮೀಪದ 10ನೇ ಮೈಲುಗಲ್ಲು ಬಳಿ ಚಿರತೆಯೊಂದನ್ನು ನೋಡಿದ್ದಾಗಿ ತಿಳಿಸಿದ್ದಾರೆ.

ಹತ್ತನೇ ಮೈಲುಗಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಚಿರತೆಯನ್ನು ನೋಡಿದ್ದು ಕೂಡಲೇ ಅದು ಹೆದ್ದಾರಿ ಪಕ್ಕದ ಖಾಲಿ ಜಾಗದಲ್ಲಿ ಓಡಿದೆ ಎಂದು ತಿಳಿಸಿದ್ದಾರೆ.

ಚಿರತೆಯ ಬಗ್ಗೆ ಅವರು ಪಕ್ಕದ ಹೊಟೇಲ್ ಒಂದರಲ್ಲಿದ್ದ ಸ್ಥಳೀಯರಲ್ಲಿ ಮಾಹಿತಿ ನೀಡಿದ್ದು ಬಳಿಕ ಈ ಸುದ್ದಿ ಪರಿಸರದಲ್ಲಿ ಹರಿದಾಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಫರಂಗಿಪೇಟೆ ಸಮೀಪದ ವಳಚ್ಚಿಲ್ ಪದವು ಎಂಬಲ್ಲಿನ ಜನರು ಶನಿವಾರ ಬೆಳಗ್ಗೆ ಪರಿಸರದಲ್ಲಿ ಚಿರತೆಯೊಂದನ್ನು ನೋಡಿದ್ದ ಬಗ್ಗೆ ಸುದ್ದಿ ತಿಳಿದು ಬಂದಿದೆ. ಅದೇ ಚಿರತೆ ರಾತ್ರಿ ಹತ್ತನೇ ಮೈಲುಗಲ್ಲಿನಲ್ಲಿ ಕಂಡುಬಂದಿರಬಹುದು ಎಂದು ಸ್ಥಳೀಯ ಜನರು ತಿಳಿಸಿದ್ದಾರೆ‌.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಪುದು ಗ್ರಾಮ ಪಂಚಾಯತ್‌ ಅಧ್ಯಕ್ಷ ರಮ್ಲಾನ್‌ ಮಾರಿಪಳ್ಳ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು