4:53 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

25/09/2022, 18:02

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.

ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಫರಂಗಿಪೇಟೆ ಸಮೀಪದ 10ನೇ ಮೈಲುಗಲ್ಲು ಬಳಿ ಚಿರತೆಯೊಂದನ್ನು ನೋಡಿದ್ದಾಗಿ ತಿಳಿಸಿದ್ದಾರೆ.

ಹತ್ತನೇ ಮೈಲುಗಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಚಿರತೆಯನ್ನು ನೋಡಿದ್ದು ಕೂಡಲೇ ಅದು ಹೆದ್ದಾರಿ ಪಕ್ಕದ ಖಾಲಿ ಜಾಗದಲ್ಲಿ ಓಡಿದೆ ಎಂದು ತಿಳಿಸಿದ್ದಾರೆ.

ಚಿರತೆಯ ಬಗ್ಗೆ ಅವರು ಪಕ್ಕದ ಹೊಟೇಲ್ ಒಂದರಲ್ಲಿದ್ದ ಸ್ಥಳೀಯರಲ್ಲಿ ಮಾಹಿತಿ ನೀಡಿದ್ದು ಬಳಿಕ ಈ ಸುದ್ದಿ ಪರಿಸರದಲ್ಲಿ ಹರಿದಾಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಫರಂಗಿಪೇಟೆ ಸಮೀಪದ ವಳಚ್ಚಿಲ್ ಪದವು ಎಂಬಲ್ಲಿನ ಜನರು ಶನಿವಾರ ಬೆಳಗ್ಗೆ ಪರಿಸರದಲ್ಲಿ ಚಿರತೆಯೊಂದನ್ನು ನೋಡಿದ್ದ ಬಗ್ಗೆ ಸುದ್ದಿ ತಿಳಿದು ಬಂದಿದೆ. ಅದೇ ಚಿರತೆ ರಾತ್ರಿ ಹತ್ತನೇ ಮೈಲುಗಲ್ಲಿನಲ್ಲಿ ಕಂಡುಬಂದಿರಬಹುದು ಎಂದು ಸ್ಥಳೀಯ ಜನರು ತಿಳಿಸಿದ್ದಾರೆ‌.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಪುದು ಗ್ರಾಮ ಪಂಚಾಯತ್‌ ಅಧ್ಯಕ್ಷ ರಮ್ಲಾನ್‌ ಮಾರಿಪಳ್ಳ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು