1:33 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಅರ್ಧಂಬರ್ಧ ಕಾಮಗಾರಿ!: ಜನರಿಗೆ ತಪ್ಪದ ಕಿರಿಕಿರಿ!!: ಅಭಿವೃದ್ಧಿ ಹೆಸರಿನಲ್ಲಿ ನಿತ್ಯ ನರಕ!

25/09/2022, 19:13

ಅನುಷ್ ಪಂಡಿತ್ ಮಂಗಳೂರು /ಗಣೇಶ್ ಅದ್ಯಪಾಡಿ

info.reporterkarnataka@gmail.com

ಸ್ಮಾರ್ಟ್ ಸಿಟಿ ಆಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರ ಇನ್ನೂ ಹಲವಾರು ಮೂಲ ಸೌಕರ್ಯಗಳ ಸಮರ್ಪಕ ನಿರ್ವಹಣೆಯಲ್ಲಿ ಹಿಂದೆ ಉಳಿದಿದೆ ಎಂದರೆ ತಪ್ಪಾಗಲಾರದು.

ಹೌದು, ನಗರದ ಮುಖ್ಯ ಸಮಸ್ಯೆಯಾದ ಚರಂಡಿಗಳ ನಿರ್ಮಾಣ ಹಾಗೂ ನಿರ್ವಹಣೆ ಸರಿಯಾದ ರೀತಿಯಲ್ಲಿ ಆಗದೆ ಇರುವುದರಿಂದ ಹಲವಾರು ರೀತಿಯ ಸಮಸ್ಯೆಗಳು ಎದುರಾಗುತ್ತಿವೆ.


ವೇದವ್ಯಾಸ ಕಾಮತರು ಶಾಸಕರಾದ ಮೇಲೆ ಹಲವಾರು ಅನುದಾನಗಳು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸಿಕ್ಕಿದರೂ ಕೂಡ ಕಾಮಗಾರಿಗಳು ಸಮಯಕ್ಕೆ ಮುಕ್ತಾಯಗೊಳ್ಳದೆ ಜನರು ಕಿರಿಕಿರಿ ಅನುಭವಿಸುವಂತಾಗಿದೆ.

ನಗರದ ಹಲವು ಭಾಗಗಳಲ್ಲಿ ಒಳಚರಂಡಿ ದುರಸ್ತಿಗಾಗಿ ರಸ್ತೆಯನ್ನು ಅಗೆದು ಹಾಗೆಯೆ ಬಿಡಲಾಗಿದೆ. ಜ್ಯೋತಿ ಬಲ್ಮಠದ ಸುತ್ತಾ ಈ ರೀತಿಯ ಸಮಸ್ಯೆಗಳನ್ನು ಕಾಣಬಹುದು.

ಅದೇ ರೀತಿ ಹಲವು ಕಡೆ ಫುಟ್ ಪಾತ್ ಚರಂಡಿ ಸ್ಲ್ಯಾಬ್‌ಗಳು ಕಳಚಿ ಹೋಗಿದ್ದರೂ ಇನ್ನೂ ರಿಪೇರಿ ನಡೆದಿಲ್ಲ. ಕಲೆಕ್ಟರ್‌ಸ್ ಗೇಟ್ ಹಾಗೂ ಬಲ್ಲಾಳ್ ಭಾಗ್‌ನ ಮಣ್ಣಗುಡ್ಡೆ ರಸ್ತೆಯಲ್ಲಿ ಈ ಸಮಸ್ಯೆಯನ್ನು ಕಾಣಬಹುದು. ಅದೇ ರೀತಿ ನಗರದ ಮುಖ್ಯ ಭಾಗದ ಹಲವಾರು ರಸ್ತೆಗಳ ರಿಪೇರಿ ಕೂಡ ಸಮರ್ಪಕವಾಗಿ ಮಾಡಲಿಲ್ಲ..

ಮಂಗಳೂರು ಮಹಾನಗರ ಪಾಲಿಕೆ ಸಮೀಪದಲ್ಲಿ ಹಾಗೂ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಇ-ಟಾಯ್ಲೆಟ್ ಸ್ಥಾಪಿಸಲಾಗಿತ್ತು ಆದರೆ ಇದೀಗ ಸಮರ್ಪಕ ನಿರ್ವಹಣೆ ಇರದೆ ಮೂಲೆಗೆ ಸೇರಿಬಿಟ್ಟಿದೆ. ಇದರ ಬಗ್ಗೆಯೂ ಮಾರ್ವಲೆಸ್ ಮಂಗಳೂರು, ಗ್ರೀನ್ ಮಂಗಳೂರು ಅಭಿಯಾನಗಳನ್ನು ಆರಂಭಿಸಿದ ಮಾನನೀಯ ಶಾಸಕರು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು