8:54 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ  ಪ್ರಚಾರ ಮಾಡಿದ್ದಲೆಲ್ಲ ಕಮಲ ಅರಳಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

25/09/2022, 22:47

ಮೈಸೂರು(reporterkarnataka.com):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗಿ ಪ್ರಚಾರ ಮಾಡಿದ್ದರೋ ಅಲ್ಲೆಲ್ಲ ಕಮಲ ಅರಳಿದೆ. ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಮಾಡಲು ಬಂದರೆ ಇಲ್ಲೂ ಸಹ ಕಮಲ ಅರಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಅವರು, ನಾಳೆ ನಡೆಯಲಿರುವ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲು ಮೈಸೂರಿಗೆ ಬಂದಿದ್ದೇನೆ. ನಾಡಿನ ಸಮಸ್ತ ಜನರಿಗೆ ದಸರಾ ಹಬ್ಬದ ಶುಭಾಶಯಗಳು. ದಸರಾ ಹಬ್ಬದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ಇದೇ ವೇಳೆ ಕಾಂಗ್ರೆಸ್‌ನ ಪೇಸಿಎಂ ಅಭಿಯಾನ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಸರಣಿ ಹಗರಣಗಳಾಗಿವೆ. ಅವರು ಈ ರೀತಿ ಪ್ರಚಾರ ಮಾಡಿಕೊಂಡು ಹೋಗಲಿ. ಡರ್ಟಿ ಪಾಲಿಟಿಕ್ಸ್‌ನಿಂದಲೇ ಕಾಂಗ್ರೆಸ್ ಅಧಃಪತನದತ್ತ ಸಾಗುತ್ತಿದೆ. ರಾಜ್ಯದ ಮರ್ಯಾದೆಯನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ ಎಂದು ಟೀಕಿಸಿದರು. ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಅಭಿಯಾನ ಆಗಮಿಸುತ್ತಿದ್ದು, ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿದ್ದಾರೆ. ಅವರು ಬಂದು ಹೋದರೆ ನಮಗೆ ನಷ್ಟ ಹಾಗೂ ತೊಂದರೆ ಇಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು