1:56 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೈಸೂರು: ಇಂದಿನಿಂದ 90 ದಿನಗಳ ಕಾಲ ದಸರಾ ವಸ್ತು ಪ್ರದರ್ಶನ; ಪುನೀತ್‌ ರಾಜ್‌ಕುಮಾರ್ ಸ್ಯಾಂಡ್ ಮ್ಯೂಸಿಯಂ

26/09/2022, 10:50

ಮೈಸೂರು(reporterkarnataka.com):ಮೈಸೂರು ದಸರಾ ಅಂಗವಾಗಿ ದೊಡ್ಡ ಕೆರೆ ಮೈದಾನದಲ್ಲಿ ದಸರಾ ವಸ್ತುಪ್ರದರ್ಶನ ಸೆ.26ರಿಂದ 90 ದಿನಗಳವರೆಗೆ ನಡೆಯಲಿದೆ. ಈ ಬಾರಿ ಪ್ರವಾಸಿಗರನ್ನು ಆಕರ್ಷಿಸಲು ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಯಾಂಡ್ ಮ್ಯೂಸಿಯಂ ನಿರ್ಮಿಸಲಾಗಿದೆ.

ಈ ಕುರಿತು ಮಾತನಾಡಿದ ವಸ್ತು ಪ್ರದರ್ಶನ ಸಮಿತಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು, ಸೆ.26ರಂದು ಸಂಜೆ 4ಕ್ಕೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನವನ್ನು ಯಶಸ್ವಿ ಗೊಳಿಸಲು ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಂದರ್ಶಕರಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದೆ’ ಎಂದರು.

‘ವಯಸ್ಕರಿಗೆ 30 ರೂ, ಮಕ್ಕಳಿಗೆ 20ರೂ ಹಾಗೂ ದ್ವಿಚಕ್ರ ವಾಹನಗಳ ನಿಲುಗಡೆಗೆ 10 ರೂ , ಕಾರ್‌ಗಳಿಗೆ 30 ರೂ , ಬಸ್‌ಗಳಿಗೆ 50 ರೂ ಶುಲ್ಕ ನಿಗದಿಪಡಿಸಲಾಗಿದೆ. ಫುಡ್‌ ಕೋರ್ಟ್‌, ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ದುಬಾರಿ ದರ ವಿಧಿಸದಂತೆ ಸೂಚಿಸಲಾಗಿದೆ. ದರಪಟ್ಟಿ ಪ್ರಕಟಿಸುವಂತೆ ಹಾಗೂ ಅದನ್ನು ನಮಗೂ ಕೊಡುವಂತೆ ತಿಳಿಸಿದ್ದೇವೆ’ ಎಂದು ಹೇಳಿದರು.

ವಸ್ತುಪ್ರದರ್ಶನವು ಪ್ರತಿ ಬಾರಿಯೂ ಸರಾಸರಿ 12 ಲಕ್ಷ ಮಂದಿ ಯನ್ನು ಸೆಳೆಯುತ್ತದೆ. ಈ ಬಾರಿ ಇನ್ನೂ ಅದ್ಧೂರಿ ಹಾಗೂ ವ್ಯವಸ್ಥಿತವಾಗಿ ಸಜ್ಜು ಗೊಳಿಸಲಾಗುತ್ತಿದೆ’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು