10:35 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮೈಸೂರು: ಇಂದಿನಿಂದ 90 ದಿನಗಳ ಕಾಲ ದಸರಾ ವಸ್ತು ಪ್ರದರ್ಶನ; ಪುನೀತ್‌ ರಾಜ್‌ಕುಮಾರ್ ಸ್ಯಾಂಡ್ ಮ್ಯೂಸಿಯಂ

26/09/2022, 10:50

ಮೈಸೂರು(reporterkarnataka.com):ಮೈಸೂರು ದಸರಾ ಅಂಗವಾಗಿ ದೊಡ್ಡ ಕೆರೆ ಮೈದಾನದಲ್ಲಿ ದಸರಾ ವಸ್ತುಪ್ರದರ್ಶನ ಸೆ.26ರಿಂದ 90 ದಿನಗಳವರೆಗೆ ನಡೆಯಲಿದೆ. ಈ ಬಾರಿ ಪ್ರವಾಸಿಗರನ್ನು ಆಕರ್ಷಿಸಲು ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಯಾಂಡ್ ಮ್ಯೂಸಿಯಂ ನಿರ್ಮಿಸಲಾಗಿದೆ.

ಈ ಕುರಿತು ಮಾತನಾಡಿದ ವಸ್ತು ಪ್ರದರ್ಶನ ಸಮಿತಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು, ಸೆ.26ರಂದು ಸಂಜೆ 4ಕ್ಕೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನವನ್ನು ಯಶಸ್ವಿ ಗೊಳಿಸಲು ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಂದರ್ಶಕರಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದೆ’ ಎಂದರು.

‘ವಯಸ್ಕರಿಗೆ 30 ರೂ, ಮಕ್ಕಳಿಗೆ 20ರೂ ಹಾಗೂ ದ್ವಿಚಕ್ರ ವಾಹನಗಳ ನಿಲುಗಡೆಗೆ 10 ರೂ , ಕಾರ್‌ಗಳಿಗೆ 30 ರೂ , ಬಸ್‌ಗಳಿಗೆ 50 ರೂ ಶುಲ್ಕ ನಿಗದಿಪಡಿಸಲಾಗಿದೆ. ಫುಡ್‌ ಕೋರ್ಟ್‌, ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ದುಬಾರಿ ದರ ವಿಧಿಸದಂತೆ ಸೂಚಿಸಲಾಗಿದೆ. ದರಪಟ್ಟಿ ಪ್ರಕಟಿಸುವಂತೆ ಹಾಗೂ ಅದನ್ನು ನಮಗೂ ಕೊಡುವಂತೆ ತಿಳಿಸಿದ್ದೇವೆ’ ಎಂದು ಹೇಳಿದರು.

ವಸ್ತುಪ್ರದರ್ಶನವು ಪ್ರತಿ ಬಾರಿಯೂ ಸರಾಸರಿ 12 ಲಕ್ಷ ಮಂದಿ ಯನ್ನು ಸೆಳೆಯುತ್ತದೆ. ಈ ಬಾರಿ ಇನ್ನೂ ಅದ್ಧೂರಿ ಹಾಗೂ ವ್ಯವಸ್ಥಿತವಾಗಿ ಸಜ್ಜು ಗೊಳಿಸಲಾಗುತ್ತಿದೆ’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು