8:38 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಮೈಸೂರು: ಇಂದಿನಿಂದ 90 ದಿನಗಳ ಕಾಲ ದಸರಾ ವಸ್ತು ಪ್ರದರ್ಶನ; ಪುನೀತ್‌ ರಾಜ್‌ಕುಮಾರ್ ಸ್ಯಾಂಡ್ ಮ್ಯೂಸಿಯಂ

26/09/2022, 10:50

ಮೈಸೂರು(reporterkarnataka.com):ಮೈಸೂರು ದಸರಾ ಅಂಗವಾಗಿ ದೊಡ್ಡ ಕೆರೆ ಮೈದಾನದಲ್ಲಿ ದಸರಾ ವಸ್ತುಪ್ರದರ್ಶನ ಸೆ.26ರಿಂದ 90 ದಿನಗಳವರೆಗೆ ನಡೆಯಲಿದೆ. ಈ ಬಾರಿ ಪ್ರವಾಸಿಗರನ್ನು ಆಕರ್ಷಿಸಲು ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಯಾಂಡ್ ಮ್ಯೂಸಿಯಂ ನಿರ್ಮಿಸಲಾಗಿದೆ.

ಈ ಕುರಿತು ಮಾತನಾಡಿದ ವಸ್ತು ಪ್ರದರ್ಶನ ಸಮಿತಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು, ಸೆ.26ರಂದು ಸಂಜೆ 4ಕ್ಕೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನವನ್ನು ಯಶಸ್ವಿ ಗೊಳಿಸಲು ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಂದರ್ಶಕರಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದೆ’ ಎಂದರು.

‘ವಯಸ್ಕರಿಗೆ 30 ರೂ, ಮಕ್ಕಳಿಗೆ 20ರೂ ಹಾಗೂ ದ್ವಿಚಕ್ರ ವಾಹನಗಳ ನಿಲುಗಡೆಗೆ 10 ರೂ , ಕಾರ್‌ಗಳಿಗೆ 30 ರೂ , ಬಸ್‌ಗಳಿಗೆ 50 ರೂ ಶುಲ್ಕ ನಿಗದಿಪಡಿಸಲಾಗಿದೆ. ಫುಡ್‌ ಕೋರ್ಟ್‌, ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ದುಬಾರಿ ದರ ವಿಧಿಸದಂತೆ ಸೂಚಿಸಲಾಗಿದೆ. ದರಪಟ್ಟಿ ಪ್ರಕಟಿಸುವಂತೆ ಹಾಗೂ ಅದನ್ನು ನಮಗೂ ಕೊಡುವಂತೆ ತಿಳಿಸಿದ್ದೇವೆ’ ಎಂದು ಹೇಳಿದರು.

ವಸ್ತುಪ್ರದರ್ಶನವು ಪ್ರತಿ ಬಾರಿಯೂ ಸರಾಸರಿ 12 ಲಕ್ಷ ಮಂದಿ ಯನ್ನು ಸೆಳೆಯುತ್ತದೆ. ಈ ಬಾರಿ ಇನ್ನೂ ಅದ್ಧೂರಿ ಹಾಗೂ ವ್ಯವಸ್ಥಿತವಾಗಿ ಸಜ್ಜು ಗೊಳಿಸಲಾಗುತ್ತಿದೆ’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು