9:45 PM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿ, ನವದುರ್ಗೆಯರ ಪ್ರತಿಷ್ಠಾಪನೆ

26/09/2022, 20:15

ಮಂಗಳೂರು(reporterkarnataka.com) : ನಗರದಲ್ಲಿ ನವರಾತ್ರಿ ಸಂಭ್ರಮ ಆರಂಭಗೊಂಡಿದೆ.


ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ. 


ಶಾರದಾ ಮಾತೆ ಜತೆಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪ್ರತಿಷ್ಥಾಪನೆಯನ್ನೂ ಮಾಡಲಾಗಿದೆ.

ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ದೀಪ ಬೆಳಗಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಅನಾರೋಗ್ಯದ ಮಧ್ಯೆಯೂ ದಸರಾ ಉದ್ಘಾಟಿಸಿದ ಜನಾರ್ದನ ಪೂಜಾರಿ ಭಕ್ತರ ಜೊತೆ ಕೆಲ ಹೊತ್ತು ಬೆರೆತರು. ಒಂಭತ್ತು ದಿನಗಳ ಕಾಲ ಮಂಗಳೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಲಿದೆ. ದಸರಾ ಅಂಗವಾಗಿ ಕುದ್ರೋಳಿ ಸೇರಿದಂತೆ ಇಡೀ ಮಂಗಳೂರನ್ನು ವರ್ಣರಂಜಿತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪ್ರತಿನಿತ್ಯ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮ, ಅನ್ನದಾನ ನಡೆಯಲಿದೆ.


ಅಕ್ಟೋಬರ್ 5 ರಂದು ನಗರದ ರಾಜಬೀದಿಯಲ್ಲಿ ಮೆರವಣಿಗೆಯಲ್ಲಿ ಮೂರ್ತಿಯನ್ನು ಕೊಂಡೊಯ್ದು ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು