2:37 PM Monday1 - June 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ

28/06/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.

ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡೆ, ಸದಾಶಿವ ಗೋಪಾಲ್ ಬನಸೊಡೆ, ಶಂಕರ್ ಗೋಪಾಲ ಬನಸೊಡೆ ಹಾಗೂ ಧರೆಪ್ಪ ಗೋಪಾಲ ಬನಸೊಡೆ ಎಂದು ಗುರುತಿಸಲಾಗಿದೆ. ಈ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಮನೆ ಸಮೀಪದ ಕೃಷ್ಣಾ ನದಿಗೆ ಬಟ್ಟೆ ಒಗೆಯಲೆಂದು ತೆರಳಿದ್ದರು. ನದಿ ದಂಡೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಬ್ಬಾತ ಬಿದ್ದಾಗ ಆತನ ರಕ್ಷಣೆಗೆಂದು ಇತರ ಮೂವರು ಸಹೋದರರು ನೀರಿಗೆ ಹಾರಿದ್ದರು. ಈ ನಾಲ್ವರಲ್ಲಿ 


ಒಬ್ಬಾತನಿಗೆ ಮಾತ್ರ ಈಜಲು ಬರುತ್ತಿತ್ತು. ಈಜು ಬಾರದ ಇತರ ಮೂವರು ಸಹೋದರರು ಪ್ರಾಣಭೀತಿಯಿಂದ ಆತನನ್ನು ತಬ್ಬಿಕೊಂಡಿರುವುದರಿಂದ ನಾಲ್ವರು ಸಹೋದರರು ಒಟ್ಟಿಗೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಅಥಣಿ ತಾಲೂಕ ದಂಡಡಿಖಾರಿ ದುಂಡಪ್ಪ ಕೋಮಾರ ಹಾಗೂ ಅಥಣಿ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳ ಶೋಧ ಶೋಧ ಕಾರ್ಯ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು