1:53 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ

28/06/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.

ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡೆ, ಸದಾಶಿವ ಗೋಪಾಲ್ ಬನಸೊಡೆ, ಶಂಕರ್ ಗೋಪಾಲ ಬನಸೊಡೆ ಹಾಗೂ ಧರೆಪ್ಪ ಗೋಪಾಲ ಬನಸೊಡೆ ಎಂದು ಗುರುತಿಸಲಾಗಿದೆ. ಈ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಮನೆ ಸಮೀಪದ ಕೃಷ್ಣಾ ನದಿಗೆ ಬಟ್ಟೆ ಒಗೆಯಲೆಂದು ತೆರಳಿದ್ದರು. ನದಿ ದಂಡೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಬ್ಬಾತ ಬಿದ್ದಾಗ ಆತನ ರಕ್ಷಣೆಗೆಂದು ಇತರ ಮೂವರು ಸಹೋದರರು ನೀರಿಗೆ ಹಾರಿದ್ದರು. ಈ ನಾಲ್ವರಲ್ಲಿ 


ಒಬ್ಬಾತನಿಗೆ ಮಾತ್ರ ಈಜಲು ಬರುತ್ತಿತ್ತು. ಈಜು ಬಾರದ ಇತರ ಮೂವರು ಸಹೋದರರು ಪ್ರಾಣಭೀತಿಯಿಂದ ಆತನನ್ನು ತಬ್ಬಿಕೊಂಡಿರುವುದರಿಂದ ನಾಲ್ವರು ಸಹೋದರರು ಒಟ್ಟಿಗೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಅಥಣಿ ತಾಲೂಕ ದಂಡಡಿಖಾರಿ ದುಂಡಪ್ಪ ಕೋಮಾರ ಹಾಗೂ ಅಥಣಿ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳ ಶೋಧ ಶೋಧ ಕಾರ್ಯ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು