5:39 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ವಿಭಜನೆ: ಶೀಘ್ರದಲ್ಲೇ ಕೊಡಗು ವಿವಿ ಅಸ್ತಿತ್ವಕ್ಕೆ

26/09/2022, 23:18

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ವಿಭಜನೆಯಾಗಲಿದೆ. ಕೊಡಗು ಜಿಲ್ಲೆಯ ಮಂಗಳೂರು ವಿವಿ ವ್ಯಾಪ್ತಿಯಿಂದ ಹೊರಗುಳಿಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರ್ಪಡೆಯಾಗಲಿದೆ.

ಇದೀಗ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಸ್ತಿತ್ವದಲ್ಲಿದೆ.

ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರಲಿದೆ.

ಮಂಗಳೂರು ವಿವಿಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದೆ. ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿವಿಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿವಿ ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ ಕಾಲೇಜು, ಸಂಯೋಜಿತ ಕಾಲೇಜು, ಸ್ನಾತಕೋತ್ತರ, ಸಂಶೋಧನ ಕೇಂದ್ರವು ಮಂಗಳೂರು ವಿವಿಯಿಂದ ಹೊರಗುಳಿಯಲಿವೆ.

ಕೊಡಗು ಜಿಲ್ಲೆಯಲ್ಲಿರುವ ಕಾಲೇಜುಗಳವರು ವಿಶ್ವವಿದ್ಯಾನಿಲಯಕ್ಕೆ ಹೋಗ ಬೇಕೆಂದರೆ 100 ಕಿ.ಮೀ.ಗೂ ಅಧಿಕ ದೂರದಲ್ಲಿರುವ ಮಂಗಳೂರಿಗೆ ಆಗಮಿಸಬೇಕು. ಪರೀಕ್ಷೆ-ಮೌಲ್ಯಮಾಪನಕ್ಕೂ ಉಪನ್ಯಾಸಕರು ಅತ್ತಿಂದಿತ್ತ ತೆರಳಬೇಕು. ಆ ಹಿನ್ನೆಲೆಯಲ್ಲಿ ಮಡಿಕೇರಿ ಭಾಗಕ್ಕೆ ಪ್ರತ್ಯೇಕವಿ.ವಿ. ಬೇಕೆಂದು ಶಾಸಕ ಅಪ್ಪಚ್ಚು ರಂಜನ್‌ ಆಗ್ರಹಿಸಿದ್ದರಿಂದ 2 ವರ್ಷದ ಹಿಂದೆ ಕೊಡಗು ವಿವಿ ಎಂಬ ಹೊಸ ವಿವಿ ಸ್ಥಾಪನೆಗೆ ಚಿಂತಿಸಲಾಗಿತ್ತು.

ವಿಶಾಲ ವ್ಯಾಪ್ತಿ ಹಾಗೂ ಯೋಗ್ಯ ನಿವೇಶನವಿರುವುದರಿಂದ ಚಿಕ್ಕಳುವಾರದ ಲ್ಲಿರುವ ಮಂಗಳೂರು ವಿವಿ ಸ್ನಾತಕೋತ್ತರ ಹಾಗೂ ಸಂಶೋಧನ ಕೇಂದ್ರವು ಇನ್ನು ಮುಂದೆ ಕೊಡಗು ವಿವಿ ಕ್ಯಾಂಪಸ್‌ ಆಗುವ ಎಲ್ಲ ಸಾಧ್ಯತೆಗಳಿವೆ. ವಿಧಾನಸಭಾ ಅಧಿವೇಶನ ಮುಗಿದ ಅನಂತರ ಉನ್ನತ ಶಿಕ್ಷಣ ಇಲಾಖೆಯು ವಿಶೇಷ ಅಧಿಕಾರಿಯನ್ನು ಇಲ್ಲಿಗೆ ನಿಯೋಜಿಸುವ ಮೂಲಕ ಹೊಸ ವಿವಿ ಸ್ಥಾಪನೆಗೆ ಎಲ್ಲ ಸಿದ್ಧತೆ ಆರಂಭಿಸುವ ಬಗ್ಗೆ ಮಾಹಿತಿ ಲಯಿದೆ. ಈ ಮಧ್ಯೆ ಮಂಗಳೂರು ವಿವಿ ಅಧೀನದಲ್ಲಿರುವ ವಿವಿಧ ಅಧ್ಯಯನ ಪೀಠ ಹಾಗೂ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಯ ಕಾರ್ಯನಿರ್ವಹಣೆ ಬಗ್ಗೆ ಇನ್ನಷ್ಟೇ ಪ್ರಕ್ರಿಯೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು