11:17 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ವಿಭಜನೆ: ಶೀಘ್ರದಲ್ಲೇ ಕೊಡಗು ವಿವಿ ಅಸ್ತಿತ್ವಕ್ಕೆ

26/09/2022, 23:18

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ವಿಭಜನೆಯಾಗಲಿದೆ. ಕೊಡಗು ಜಿಲ್ಲೆಯ ಮಂಗಳೂರು ವಿವಿ ವ್ಯಾಪ್ತಿಯಿಂದ ಹೊರಗುಳಿಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರ್ಪಡೆಯಾಗಲಿದೆ.

ಇದೀಗ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಸ್ತಿತ್ವದಲ್ಲಿದೆ.

ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರಲಿದೆ.

ಮಂಗಳೂರು ವಿವಿಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದೆ. ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿವಿಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿವಿ ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ ಕಾಲೇಜು, ಸಂಯೋಜಿತ ಕಾಲೇಜು, ಸ್ನಾತಕೋತ್ತರ, ಸಂಶೋಧನ ಕೇಂದ್ರವು ಮಂಗಳೂರು ವಿವಿಯಿಂದ ಹೊರಗುಳಿಯಲಿವೆ.

ಕೊಡಗು ಜಿಲ್ಲೆಯಲ್ಲಿರುವ ಕಾಲೇಜುಗಳವರು ವಿಶ್ವವಿದ್ಯಾನಿಲಯಕ್ಕೆ ಹೋಗ ಬೇಕೆಂದರೆ 100 ಕಿ.ಮೀ.ಗೂ ಅಧಿಕ ದೂರದಲ್ಲಿರುವ ಮಂಗಳೂರಿಗೆ ಆಗಮಿಸಬೇಕು. ಪರೀಕ್ಷೆ-ಮೌಲ್ಯಮಾಪನಕ್ಕೂ ಉಪನ್ಯಾಸಕರು ಅತ್ತಿಂದಿತ್ತ ತೆರಳಬೇಕು. ಆ ಹಿನ್ನೆಲೆಯಲ್ಲಿ ಮಡಿಕೇರಿ ಭಾಗಕ್ಕೆ ಪ್ರತ್ಯೇಕವಿ.ವಿ. ಬೇಕೆಂದು ಶಾಸಕ ಅಪ್ಪಚ್ಚು ರಂಜನ್‌ ಆಗ್ರಹಿಸಿದ್ದರಿಂದ 2 ವರ್ಷದ ಹಿಂದೆ ಕೊಡಗು ವಿವಿ ಎಂಬ ಹೊಸ ವಿವಿ ಸ್ಥಾಪನೆಗೆ ಚಿಂತಿಸಲಾಗಿತ್ತು.

ವಿಶಾಲ ವ್ಯಾಪ್ತಿ ಹಾಗೂ ಯೋಗ್ಯ ನಿವೇಶನವಿರುವುದರಿಂದ ಚಿಕ್ಕಳುವಾರದ ಲ್ಲಿರುವ ಮಂಗಳೂರು ವಿವಿ ಸ್ನಾತಕೋತ್ತರ ಹಾಗೂ ಸಂಶೋಧನ ಕೇಂದ್ರವು ಇನ್ನು ಮುಂದೆ ಕೊಡಗು ವಿವಿ ಕ್ಯಾಂಪಸ್‌ ಆಗುವ ಎಲ್ಲ ಸಾಧ್ಯತೆಗಳಿವೆ. ವಿಧಾನಸಭಾ ಅಧಿವೇಶನ ಮುಗಿದ ಅನಂತರ ಉನ್ನತ ಶಿಕ್ಷಣ ಇಲಾಖೆಯು ವಿಶೇಷ ಅಧಿಕಾರಿಯನ್ನು ಇಲ್ಲಿಗೆ ನಿಯೋಜಿಸುವ ಮೂಲಕ ಹೊಸ ವಿವಿ ಸ್ಥಾಪನೆಗೆ ಎಲ್ಲ ಸಿದ್ಧತೆ ಆರಂಭಿಸುವ ಬಗ್ಗೆ ಮಾಹಿತಿ ಲಯಿದೆ. ಈ ಮಧ್ಯೆ ಮಂಗಳೂರು ವಿವಿ ಅಧೀನದಲ್ಲಿರುವ ವಿವಿಧ ಅಧ್ಯಯನ ಪೀಠ ಹಾಗೂ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಯ ಕಾರ್ಯನಿರ್ವಹಣೆ ಬಗ್ಗೆ ಇನ್ನಷ್ಟೇ ಪ್ರಕ್ರಿಯೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು